ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಈಶಾನ್ಯ ರಾಜ್ಯಗಳಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದಾಗಿ ಸಾವಿರಾರು ಕುಟುಂಬಗಳು ನಿರಾಶ್ರಿತವಾಗಿದ್ದು, ಇತ್ತ ರಕ್ಷೆಣೆಗೆ ಭಾರತೀಯ ಸೇನೆ ದೌಡಾಯಿಸಿದೆ.
ಭಾರತೀಯ ಸೇನೆ ಮಾನವೀಯ ನೆರವು ಹಾಗೂ ವಿಪತ್ತು ಪರಿಹಾರ (ಎಚ್ಎಡಿಆರ್) ಕಾರ್ಯಾಚರಣೆ ಪ್ರಾರಂಭಿಸಿದ್ದು, ಜನರನ್ನು ರಕ್ಷಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಪರೇಷನ್ ಜಲ ರಹತ್-2 ಅಡಿಯಲ್ಲಿ ಈಶಾನ್ಯ ರಾಜ್ಯಗಳಾದ ಉತ್ತರಾಖಂಡ, ನಾಗಾಲ್ಯಾಂಡ್, ಅಸ್ಸಾಂ ಮತ್ತು ಮಣಿಪುರದಾದ್ಯಂತ 40 ಪರಿಹಾರ ತಂಡಗಳನ್ನು ನಿಯೋಜಿಸಿದ್ದು, ಸ್ಥಳೀಯ ಆಡಳಿತದ ಸಹಯೋಗದೊಂದಿಗೆ ಕಾರ್ಯಾಚರಣೆ ನಡೆಸುತ್ತಿದ್ದು, ಈವರೆಗೆ ಒಟ್ಟು 3,820 ಜನರನ್ನು ರಕ್ಷಣೆ ಮಾಡಲಾಗಿದೆ ಎಂದು ಸೇನೆ ಪ್ರಕಟಣೆಯಲ್ಲಿ ತಿಳಿಸಿದೆ.
ಸೇನೆಯು ಸಂತ್ರಸ್ತರಿಗೆ 1,361 ಆಹಾರ ಪೊಟ್ಟಣ, 15,421 ನೀರಿನ ಬಾಟಲಿಗಳನ್ನು ವಿತರಿಸಲಾಗಿದೆ. ಜತೆಗೆ, 2,095 ಜನರಿಗೆ ವೈದ್ಯಕೀಯ ನೆರವು ನೀಡಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.