ಅತ್ತ ಭಾರತ-ಇಂಗ್ಲೆಂಡ್‌ ಗೆಲುವಿಗಾಗಿ ಜಿದ್ದಾಜಿದ್ದಿ ಹೋರಾಟ: ಇತ್ತ ಸಿರಾಜ್ ಗೆ ಬಿತ್ತು ದಂಡದ ಬರೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಹಾಗೂ ಇಂಗ್ಲೆಂಡ್‌ ಮ್ಯಾಚ್ ರೋಚಕಘಟ್ಟದತ್ತ ಸಾಗಿದೆ. ಲಾರ್ಡ್ಸ್‌ ಮೈದಾನದಲ್ಲಿ ಗೆಲುವಿಗಾಗಿ ಉಭಯ ತಂಡಗಳ ನಡುವೆ ಜಿದ್ದಾಜಿದ್ದಿನ ಹೋರಾಟ ಕಂಡುಬರುತ್ತಿದೆ.

ಈ ನಡುವೆ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್​ಗೆ ಐಸಿಸಿ ದಂಡದ ಬರೆ ಎಳೆದಿದೆ. ವಾಸ್ತವವಾಗಿ ಈ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ಬೌಲಿಂಗ್ ಮಾಡುವ ವೇಳೆ ಮೊಹಮ್ಮದ್ ಸಿರಾಜ್, ಐಸಿಸಿ (ICC) ನಿಯಮಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದರು. ಇಂಗ್ಲೆಂಡ್‌ ಆರಂಭಿಕ ಆಟಗಾರ ಬೆನ್ ಡಕೆಟ್ ವಿಕೆಟ್ ಉರಳಿಸಿದ್ದ ಸಿರಾಜ್, ಅವರ ಬಳಿ ಹೋಗಿ ಆಕ್ರಮಣಕಾರಿಯಾಗಿ ಸಂಭ್ರಮಾಚರಿಸಿದಲ್ಲದೆ, ಈ ವೇಳೆ ಅವರ ಭುಜಕ್ಕೆ ತಮ್ಮ ಭುಜ ತಾಗಿಸಿದ್ದರು. ಹೀಗಾಗಿ ಸಿರಾಜ್ ಐಸಿಸಿ ನೀತಿ ಸಂಹಿತೆಯ ಸೆಕ್ಷನ್ 2.5 ರ ಅಡಿಯಲ್ಲಿ ತಪ್ಪಿತಸ್ಥರೆಂದು ಪರಿಗಣಿಸಲಾಗಿದ್ದು, ದಂಡ ವಿಧಿಸಲಾಗಿದೆ.

ಈ ತಪ್ಪಿಗೆ ಸಿರಾಜ್‌ಗೆ ದಂಡ ವಿಧಿಸಲಾಗಿದ್ದು, ಅವರ ಖಾತೆಗೆ ಒಂದು ಡಿಮೆರಿಟ್ ಪಾಯಿಂಟ್ ಕೂಡ ಸೇರಿದೆ. ಈ ಮೂಲಕ ಸಿರಾಜ್​ ಇದುವರೆಗೆ ಒಟ್ಟು 2 ಡಿಮೆರಿಟ್ ಪಾಯಿಂಟ್‌ಗಳನ್ನು ಪಡೆದಿದ್ದಾರೆ. ಕಳೆದ 24 ತಿಂಗಳಲ್ಲಿ ಇದು ಸಿರಾಜ್ ಮಾಡಿದ ಎರಡನೇ ತಪ್ಪಾಗಿದ್ದು, ಸಿರಾಜ್​ಗೆ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗುವ ಭೀತಿ ಎದುರಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!