ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಳೆಗಾಲದಲ್ಲಿ ಕಾಫಿನಾಡು ಚಿಕ್ಕಮಗಳೂರು ನೋಡೋದಕ್ಕೆ ಸ್ವರ್ಗದಂತೆ ಕಾಣಿಸುತ್ತದೆ. ಈ ಕಾರಣದಿಂದ ವೀಕೆಂಡ್ ಫನ್ಗಾಗಿ ಸಿಲಿಕಾನ್ ಸಿಟಿ ಸೇರಿ ಹಲವು ಜಿಲ್ಲೆಯ ಜನರು ಟ್ರಿಪ್ಗೆಂದು ಭೇಟಿ ನೀಡುತ್ತಾರೆ. ಇವರಿಗೆ ಚಿಕ್ಕಮಗಳೂರು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಐದು ದಿನ ಅರೆಂಜ್ ಅಲರ್ಟ್ ಘೋಷಿಸಲಾಗಿದೆ. ಪಶ್ಚಿಮಘಟ್ಟ ಸಾಲಿನಲ್ಲಿ ಚಾರಣ ಮಾಡುವಾಗ ಪ್ರವಾಸಿಗರು ಜಾಗ್ರತೆಯಿಂದ ಇರಬೇಕು. ಗುಡ್ಡ, ಧರೆ ಕುಸಿತದ ಸಂಭವವಿರುವುದರಿಂದ ಸ್ಥಳೀಯರು ಸಹ ಸಾಕಷ್ಟು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.
ಜಿಲ್ಲೆಯ ಪ್ರವಾಸಿ ತಾಣಗಳಿಗೆ ವೀಕೆಂಡ್ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಜಿಲ್ಲಾಡಳಿತ ಸೂಚನೆ ನಿಡಿದೆ. ಇನ್ನೂ ಜಿಲ್ಲೆಯಲ್ಲಿ ಬರುವ ನದಿಗಳ ಪಾತ್ರದಲ್ಲಿರುವ ಜನರು ಸಹ, ನದಿಗಳಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.