ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಒಂದೇ ಕುಟುಂಬದ ನಾಲ್ವರ ಮೃತದೇಹ ಬಿಹಾರದಲ್ಲಿ ಸಿಕ್ಕಿದೆ!
ಹೌದು, ಬಿಹಾರದ ನಾಲಂದಾ ಜಿಲ್ಲೆಯ ರಾಜಗೀರ್ನ ಧರ್ಮಶಾಲೆಯೊಂದರಲ್ಲಿ ನಾಲ್ವರ ಮೃತದೇಹಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ತಾಯಿ ಸುಮಂಗಲಾ, ಮಕ್ಕಳಾದ ನಾಗಪ್ರಸಾದ್, ಶಿಲ್ಪಾ ಹಾಗೂ ಶ್ರುತ ಮೃತರು. ಮೃತರಿಗೆ ಸೇರಿದ ಮೊಬೈಲ್ ಪೋನ್ಗಳು, ಆಧಾರ್ ಕಾರ್ಡ್, ಪಾನ್ ಕಾರ್ಡ್, ಎಟಿಎಂ ಕಾರ್ಡ್ ಸೇರಿದಂತೆ ಹಲವು ದಾಖಲೆಗಳು, ₹1,18,000 ಹಣ ಹಾಗೂ ದೊಡ್ಡ ಪ್ರಮಾಣದ ನಿದ್ರೆ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ರಾಜಗೀರ್ ಬೌದ್ಧ ಹಾಗೂ ಜೈನರಿಗೆ ಪವಿತ್ರ ಯಾತ್ರಾಸ್ಥಳವಾಗಿದೆ. ಇಲ್ಲಿಗೆ ಬಂದು ಕೊಠಡಿ ಬುಕ್ ಮಾಡಿಕೊಂಡಿದ್ದರು. ಮೂರು ದಿನಗಳ ನಂತರ ಕೊಠಡಿಯಿಂದ ಕೊಳೆತ ವಾಸನೆ ಬಂದಿದೆ. ತಕ್ಷಣ ಕೊಠಡಿಯ ಮ್ಯಾನೇಜರ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದು ನೋಡಿದಾಗ ನಾಲ್ವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸದ್ಯ ರಾಜ್ಯ ಪೊಲೀಸರನ್ನು ಸಂಪರ್ಕಿಸಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.



