ಎಲ್ಲಾ ಸಮಸ್ಯೆಗೂ ಪವಿತ್ರಗೌಡ ಕಾರಣ, ಹೈಕೋರ್ಟ್​ ಮಾಡಿದ ತಪ್ಪನ್ನು ನಾವು ಮಾಡಲ್ಲ: ಸುಪ್ರೀಂ ಕೋರ್ಟ್ ಗರಂ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೇಣುಕಾಸ್ವಾಮಿ ಪ್ರಕರಣದದಲ್ಲಿ ಕರ್ನಾಟಕ ಹೈಕೋರ್ಟ್​​ ಆರೋಪಿಗಳಿಗೆ ನೀಡಿರುವ ಜಾಮೀನು ರದ್ದು ಮಾಡುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದೆ. ಇಂದು ವಾದ-ಪ್ರತಿವಾದ ಆಲಿಸಿರುವ ಸುಪ್ರೀಂ, ತೀರ್ಪನ್ನು ಮುಂದಿನ ವಾರ ಪ್ರಕಟಿಸೋದಾಗಿ ತಿಳಿಸಿದೆ.

ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಹಲವು ಅಭಿಪ್ರಾಯಗಳನ್ನು ಹೊರಹಾಕಿದೆ. ಇಡೀ ಪ್ರಕರಣ ನಡೆಯಲು ನೀವೇ ಕಾರಣ ಅಲ್ಲವೇ ಎಂದು ಪವಿತ್ರಾಗೆ ನೇರವಾಗಿ ಕೇಳಿದೆ.

ಪವಿತ್ರಾ ಗೌಡ ಪರ ವಾದ ಮಂಡಿಸಿದ ವಕೀಲೆ, ‘ಪವಿತ್ರಾ ಗೌಡ ಅವರಿಂದ ರೇಣುಕಾಸ್ವಾಮಿಗೆ ಒಂದೇ ಒಂದು ಗಾಯವೂ ಆಗಿಲ್ಲ. ಚಪ್ಪಲಿಯಿಂದ ಹೊಡೆದಿದ್ದಾರೆಂಬ ಒಂದು ಹೇಳಿಕೆ ಮಾತ್ರವಿದೆ’ ಎಂದು ವಾದಿಸಿದರು. ಇದಕ್ಕೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆ.ಬಿ.ಪರ್ದಿವಾಲಾ ಅಸಮಾಧಾನ ವ್ಯಕ್ತಪಡಿಸಿ, ಪವಿತ್ರಾ ಗೌಡ ಅವರಿಂದಲೇ ಎಲ್ಲವೂ ಆಗಿದೆ. ಎಲ್ಲಾ ಸಮಸ್ಯೆಗೆ ಪವಿತ್ರಾ ಗೌಡನೇ ಕಾರಣ. ಹೈಕೋರ್ಟ್ ಮಾಡಿದ ತಪ್ಪನ್ನು ನಾವು ಮಾಡಲ್ಲ ಎಂದು ಸುಪ್ರೀಂ ಕೋರ್ಟ್​ ಸೂಕ್ಷ್ಮವಾಗಿ ಹೇಳಿದೆ.

ಪವಿತ್ರಾ ಗೌಡ ದರ್ಶನ್​ಗೆ 50 ಬಾರಿ ಕಾಲ್ ಮಾಡಿದ್ದು ಏಕೆ? ಪವಿತ್ರಾಗೌಡಗೆ ಮೊದಲ ಮದುವೆ ಡಿವೋರ್ಸ್ ಆಗಿದೆಯಾ? ಪವಿತ್ರಾಗೌಡ ಏನು ಮಾಡುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್ ಪ್ರಶ್ನೆ ಮಾಡಿದೆ. ಆಗ ಪವಿತ್ರಾಗೌಡ ಪರ ವಕೀಲರು ವಾದ ಮಂಡಿಸಿ. ಪವಿತ್ರಾಗೌಡ ಕಲಾವಿದೆ ಎಂದಿದ್ದಾರೆ.

ನಾವು ಆರೋಪಿಗೆ ಶಿಕ್ಷೆ ನೀಡುವುದಿಲ್ಲ, ದೋಷಮುಕ್ತ ಮಾಡುವುದಿಲ್ಲ. ಹೈಕೋರ್ಟ್ ಮಾಡಿದ ತಪ್ಪನ್ನು ನಾವು ಮಾಡುವುದಿಲ್ಲ’ ಎಂದು ಸುಪ್ರೀಂಕೋರ್ಟ್​ನ ಪೀಠ ಹೇಳಿದೆ. ದರ್ಶನ್​ ಹಾಗೂ ಇತರರಿಗೆ ಜಾಮೀನು ನೀಡುವಾಗ ಹೈಕೊರ್ಟ್ ವಿವೇಚನೆ ಬಳಸಿಲ್ಲ ಎಂಬುದು ಸುಪ್ರೀಂಕೋರ್ಟ್ ಅಭಿಪ್ರಾಯವಾಗಿದೆ.

ಸದ್ಯ ವಾದ ಪ್ರತಿವಾದ ಆಲಿಸಿರುವ ಸುಪ್ರೀಂ ಕೋರ್ಟ್​ ಮುಂದಿನ ವಾರ ತೀರ್ಪು ಪ್ರಕಟಿಸೋದಾಗಿ ಹೇಳಿದೆ. ಹೀಗಾಗಿ ಮುಂದಿನ ವಾರ ಪ್ರಕರಣದ 7 ಆರೋಪಿಗಳ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!