ಬಿಸಿಸಿಐಯಿಂದ ಕ್ರೀಡಾಭಿಮಾನಿಗಳಿಗೆ ಗುಡ್ ನ್ಯೂಸ್: ಮತ್ತೆ ಬ್ಯಾಟ್ ಬೀಸಲಿದ್ದಾರೆ ರಿಷಭ್ ಪಂತ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂಗ್ಲೆಂಡ್‌ ವಿರುದ್ಧದ ನಾಲ್ಕನೇ ಟೆಸ್ಟ್​ ಪಂದ್ಯದ ಮೊದಲ ದಿನದಾಟದಲ್ಲಿ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್​ ಬ್ಯಾಟಿಂಗ್ ಮಾಡುವ ವೇಳೆ ಗಾಯಕ್ಕೆ ತುತ್ತಾಗಿದ್ದರು.

ಇದರಿಂದ ಪಂತ್ ನಡೆಯುವುದಕ್ಕೂ ಸಾಧ್ಯವಾಗದೆ ಮೈದಾನದ ಆಂಬುಲೆನ್ಸ್ ಸಹಾಯದಿಂದ ಮೈದಾನದಿಂದ ಹೊರ ಹೋಗಿದ್ದರು. ಆ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿಯನ್ನು ಬಿಸಿಸಿಐ ನೀಡಿತ್ತು.

https://x.com/BCCI/status/1948333548781330538?ref_src=twsrc%5Etfw%7Ctwcamp%5Etweetembed%7Ctwterm%5E1948333548781330538%7Ctwgr%5E6def22e19778ce31a07c15404be583ac41bb27e9%7Ctwcon%5Es1_&ref_url=https%3A%2F%2Ftv9kannada.com%2Fsports%2Fcricket-news%2Frishabh-pant-injured-to-bat-but-not-wicket-keep-in-manchester-test-1057475.html

ಈ ನಡುವೆ ರಿಷಭ್ ಪಂತ್ ಇಡೀ ಸರಣಿಯಿಂದಲೇ ಹೊರಬಿದ್ದಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು. ಆದರೆ ಇದೀಗ ಪಂತ್ ಗಾಯದ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐ, ಈ ಪಂದ್ಯದಲ್ಲಿ ಅವರು ಮತ್ತೆ ಆಡುವುದನ್ನು ಖಚಿತಪಡಿಸಿದೆ. ಆದರೆ ಗಾಯದ ಕಾರಣದಿಂದಾಗಿ ಪಂತ್ ಬ್ಯಾಟಿಂಗ್‌ ಮಾತ್ರ ಮಾಡಲಿದ್ದು, ಧೃವ್ ಜುರೇಲ್ ವಿಕೆಟ್ ಕೀಪಿಂಗ್ ಮಾಡಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!