ಹೊಸ ದಿಗಂತ ಡಿಜಿಟಲ್ ಡೆಸ್ಕ್:
ತಮ್ಮನಿಗೆ ಮಾರಣಾಂತಿಕ ಕಾಯಿಲೆ ಇದ್ದಿದ್ದರಿಂದ ಆಂಬುಲೆನ್ಸ್ ನಲ್ಲೆ ಆತನ ಅಕ್ಕ ಮತ್ತು ಭಾವ ಸೇರಿ ಉಸಿರಗಟ್ಟಿಸಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಚಿತ್ರದುರ್ಗದ ಹಿರಿಯೂರು ತಾಲೂಕಿನ ಐಮಂಗಲ ಎಂಬಲ್ಲಿ ಅಕ್ಕ ನಿಶಾ ಹಾಗು ಭಾವ ಮಂಜುನಾಥ್ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.
ಜುಲೈ 23 ರಂದು ಮಲ್ಲಿಕಾರ್ಜುನ ಗೆ ಅಪಘಾತವಾಗಿತ್ತು. ಗಾಯಳು ಮಂಜುನಾಥ್ ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ವೇಳೆ ಆತನಿಗೆ ರಕ್ತ ಪರೀಕ್ಷೆ ಮಾಡಲಾಗಿತ್ತು. ರಿಪೋರ್ಟ್ ನಲ್ಲಿ ಮಲ್ಲಿಕಾರ್ಜುನ ಗೆ ಮಾರಣಾಂತಿಕ ಕಾಯಿಲೆ ಇರೋದು ಗೊತ್ತಾಗಿದೆ. ಹಾಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯಿಂದ ಮಣಿಪಾಲ ಗೆ ಶಿಫ್ಟ್ ಮಾಡಲಾಯಿತು.
ಈ ವೇಳೆ ಮಲ್ಲಿಕಾರ್ಜುನ ಅಕ್ಕ ನಿಶಾ ಭಾವ ಮಂಜುನಾಥ್ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಬಳಿಕ ಅಂತ್ಯಕ್ರಿಯೆ ವೇಳೆ ವೇಳೆ ಕುತ್ತಿಗೆ ಬಳಿ ಮಾರ್ಕ್ ಇರೋದು ಪತ್ತೆಯಾಗಿದೆ. ಕಾಯಿಲೆಗೆ ಅಂಜಿ ಮಲ್ಲಿಕಾರ್ಜುನ ನನ್ನು ಹತ್ಯೆ ಮಾಡಲಾಗಿದೆ ಎನ್ನಲಾಗುತ್ತಿದೆ.
ಈ ಕುರಿತು ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಮೃತನ ತಂದೆಯಿಂದ ದೂರು ಸಲ್ಲಿಸಲಾಗಿದೆ.