ಹೊಸ ದಿಗಂತ ಡಿಜಿಟಲ್ ಡೆಸ್ಕ್;
ತುಮಕೂರು ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಧಗಧಗಿಸಿ ಹೊತ್ತಿ ಉರಿದಿರುವ ಘಟನೆ ನಡೆದಿದೆ.
ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಯಲ್ಲಾಪುರ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ತುಮಕೂರಿನಿಂದ ಹೊಸದುರ್ಗದ ಕಡೆಗೆ ಸಾಗುತ್ತಿದ್ದ ಕಾರಿನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕೂಡಲೇ ಕಾರಿನಿಂದ ಚಾಲಕ ಹೇಮಂತ್ ಎಂಬುವರು ಕೆಳಗೆ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರಿನ ಮುಂಭಾಗದಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಇತರೆಡೆ ವ್ಯಾಪಿಸಿದ ಪರಿಣಾಮ ಕಾರು ರಾಷ್ಟ್ರೀಯ ಹೆದ್ದಾರಿಯಲ್ಲೇ ಧಗಧಗಿಸಿ ಹೊತ್ತಿ ಉರಿದಿದೆ. ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸುವ ವೇಳೆಗೆ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ.