ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಪ್ ಕೇಸ್ನಲ್ಲಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹುಟ್ಟು ಹಬ್ಬದ ಹಿನ್ನೆಲೆ, ಶೃಂಗೇರಿ ಶಾರದಾಂಬೆಗೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಸೋಮವಾರ ರಾತ್ರಿಯೇ ಬಂದು ಶೃಂಗೇರಿಯಲ್ಲಿ ವಾಸ್ತವ್ಯ ರೇವಣ್ಣ ಹೂಡಿದ್ದ ಹೂಡಿದ್ದರು. ಶೃಂಗೇರಿ ಗುರುಗಳ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದರು. ಇಂದು (ಆ.5) ಬೆಳ್ಳಂ ಬೆಳಗ್ಗೆಯೇ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದು ಬೆಂಗಳೂರಿಗೆ ಹೊರಟಿದ್ದಾರೆ. ದೇವೇಗೌಡರ ಕುಟುಂಬ ಸುಮಾರು 50 ವರ್ಷಗಳಿಂದ ಶಾರದಾಂಬೆಯ ಭಕ್ತರಾಗಿದ್ದಾರೆ.