ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಧರ್ಮಸ್ಥಳ ಗ್ರಾಮದಲ್ಲಿ ಪೊಲೀಸರು ಈ ಹಿಂದೆ ಪ್ರಕರಣ ದಾಖಲಿಸದೇ ಮೃತ ದೇಹ ಒಂದನ್ನು ಹೂತು ಹಾಕಿರುವುದಾಗಿ ಜಯಂತ ಎಂಬವರು ಧರ್ಮಸ್ಥಳ ಠಾಣೆಗೆ ನೀಡಿರುವ ದೂರು ಹಾಗೂ ಅನಾಮಿಕ ವ್ಯಕ್ತಿ ಮಾಹಿತಿ ನೀಡಿದ ಪಾಯಿಂಟ್ 6ರಲ್ಲಿ ಪತ್ತೆಯಾದ ಅಸ್ಥಿಪಂಜರ ಅವಶೇಷಗಳಿಗೆ ಸಂಬಂಧಿಸಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ನಡುವೆ ಈ ಎರಡೂ ಪ್ರಕರಣಗಳನ್ನು ಮುಂದಿನ ತನಿಖೆಗಾಗಿ ಎಸ್ಐಟಿಗೆ ನೀಡಲು ರಾಜ್ಯ ಡಿಜಿಪಿ ಹಾಗೂ ಐಜಿಪಿ ಮಂಗಳವಾರ ಆದೇಶ ನೀಡಿದ್ದಾರೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.