ವರಮಹಾಲಕ್ಷ್ಮೀ ಹಬ್ಬಕ್ಕೆ ಹೂ ಕೀಳಲು ಹೋಗಿ ವ್ಯಕ್ತಿ ದುರ್ಮರಣ: ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದ‌ನ

ಹೊಸದಿಗಂತ ವರದಿ, ಹಾಸನ:

ವರಮಹಾಲಕ್ಷ್ಮೀ ಹಬ್ಬಕ್ಕೆ ತಾವರೆ ಹೂ ಕೀಳಲು ಕೆರೆಗೆ ಇಳಿದಿದ್ದ ವ್ಯಕ್ತಿ ನೀರಿಯಲ್ಲಿ ಮುಳುಗಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ, ಆಲೂರು ತಾಲ್ಲೂಕಿನ, ಬೆಳಮೆ ಗ್ರಾಮದಲ್ಲಿ ನಡೆದಿದೆ. ಬೇಲೂರು ತಾಲ್ಲೂಕಿನ, ಬಿಕ್ಕೋಡು ಗ್ರಾಮದ ದೇವರಾಜ್ (38) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ವ್ಯಕ್ತಿ.

ರಾಮೇಶ್ವರ ಗ್ರಾಮದಲ್ಲಿ ಕುಟುಂಬಸ್ಥರದಿಗೆ ವಾಸವಿದ್ದ ದೇವರಾಜ್ ನಾಳೆ ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆಯಲ್ಲಿ ಕೆರೆಗೆ ತಾವರೆ ಹೂವು ಕೀಳಲು ಇಳಿದಿದ್ದರು.‌ ಕೆರೆ ಆಳವಾಗಿದ್ದು,‌ ಕೆಸರು ತುಂಬಿಕೊಂಡಿದ್ದರಿಂದ ತಾವರೆ ಹೂವು ಕೀಳುವಾಗ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೂರು ಗಂಟೆಗಳ ಕಾಲ ಕೆರೆಯಲ್ಲಿ ಶೋಧ ಕಾರ್ಯ ನಡೆಸಿದ ಅಗ್ನಿಶಾಮಕದಳದ ಸಿಬ್ಬಂದಿ ಶವ ಮೇಲೆತ್ತಿದ್ದಾರೆ.

ಸ್ಥಳದಲ್ಲಿ ದೇವರಾಜ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆದಿದ್ದು ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!