ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪರಮಾಪ್ತರಾಗಿದ್ದ ಜಿ.ವಿ ಸೀತಾರಾಮ್ ಅವರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.
ಜಿ ವಿ ಸೀತಾರಾಮ್ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಸಹ ರದ್ದುಗೊಳಿಸಲಾಗಿದೆ. ಉಚ್ಚಾಟನೆಗೊಳಿಸಿ ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿಯಿಂದ ಆದೇಶಿಸಲಾಗಿದೆ.
ಒಕ್ಕಲಿಗ ಸಮುದಾಯದ ಬಗ್ಗೆ ಅವಾಚ್ಯ ಶಬ್ದ ಬಳಸಿ ಜಿ.ವಿ ಸೀತಾರಾಮ್ ಮಾತನಾಡಿದ್ದರು. ಇದೀಗ ಪಕ್ಷದಿಂದ ಉಚ್ಚಾಟಿಸಲಾಗಿದೆ.