ಪ್ರಧಾನಿ ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಹಳದಿ ಲೈನ್​, ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರ ಚಾಲನೆ ನೀಡಿದರು. ಈ ಎಲ್ಲ ಕಾರ್ಯಕ್ರಮಗಳನ್ನು ಮುಗಿಸಿಕೊಂಡು ಮಧ್ಯಾಹ್ನ 2:40ರ ಸುಮಾರಿಗೆ ಕಾರಿನಲ್ಲಿ ಐಐಐಟಿ ಆಡಿಟೋರಿಯಂ ನಿಂದ ಹೆಚ್​ಎಲ್​ ವಿಮಾನ ನಿಲ್ದಾಣಕ್ಕೆ ತೆರಳಿದರು.

ಪ್ರಧಾನಿ ನರೇಂದ್ರ ಮೋದಿಯವರು ತೆರಳು ರಸ್ತೆಯ ಅಕ್ಕಪಕ್ಕದಲ್ಲಿ ಬ್ಯಾರಿಕೇಡ್​ ಹಾಕಲಾಗಿತ್ತು. ಸೌತ್ ಎಂಡ್ ಸರ್ಕಲ್ ಬಳಿ ಪ್ರಧಾನಿ ಮೋದಿಯವರ ಬೆಂಗಾವಲು ವಾಹನ ತೆರಳುತ್ತಿದ್ದ ವೇಳೆ ಯುವಕನೋರ್ವ ಬ್ಯಾರಿಕೇಡ್​ ಜಂಪ್​ ಮಾಡಲು ಯತ್ನಿಸಿದನು. ಬ್ಯಾರಿಕೇಡ್ ಜಂಪ್ ಮಾಡಲು ಯತ್ನಿಸಿದ ಯುವಕನನ್ನು ಪೊಲೀಸರು ತಡೆದರು. ಬಳಿಕ ಪೊಲೀಸರು ತಕ್ಷಣ ಯುವಕನನ್ನು ಸ್ಥಳದಿಂದ ಹೊರಗೆ ಕಳುಹಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!