ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅವರು ತಡರಾತ್ರಿ ವಿಧಿವಶರಾಗಿದ್ದಾರೆ.
ಸ್ವಾಮೀಜಿಗಳ ಅಂತಿಮ ದರ್ಶನವನ್ನು ಇಂದು ಶ್ರೀಮಠದ ಆವರಣದಲ್ಲೇ ಏರ್ಪಡಿಸಲಾಗಿದೆ. ಮಧ್ಯಾಹ್ನ 3 ಗಂಟೆ ವೇಳೆಗೆ ಧಾರ್ಮಿಕ ಮುಖಂಡರು, ಪೀಠಾಧ್ಯಕ್ಷರ ನೇತೃತ್ವದಲ್ಲಿ ಭೈರವೈಕ್ಯರಾದ ಶ್ರೀಗಳ ಅಂತಿಮ ವಿಧಿ ವಿಧಾನಗಳು ನೆರವೇರಲಿವೆ.
ಶ್ರೀಗಳ ಉತ್ತರಾಧಿಕಾರಿಗಳಾದ ನಿಶ್ಚಲಾನಂದನಾಥ ಸ್ವಾಮೀಜಿ ಅವರು ಅಂತ್ಯ ಸಂಸ್ಕಾರದ ವಿಧಿ ವಿಧಾನಗಳನ್ನ ನೇರವೇರಿಸಲಿದ್ದಾರೆ. ಇ