ಮನೆಯಲ್ಲೇ ವಿಷ ಕುಡಿದು ಸಿಎಂ ಯೋಗಿಯ ಜನತಾ ದರ್ಬಾರ್​ಗೆ ಬಂದ ವ್ಯಕ್ತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಲಕ್ನೋದಲ್ಲಿ ವ್ಯಕ್ತಿಯೊಬ್ಬ ವಿಷ ಕುಡಿದು ಸಿಎಂ ಯೋಗಿ ಆದಿತ್ಯನಾಥ್ ಅವರ ಜನತಾ ದರ್ಬಾರ್​​ನಲ್ಲಿ ಭಾಗವಹಿಸಿದ್ದ ಘಟನೆ ಬೆಳಕಿಗೆ ಬಂದಿದೆ.

ಗಾಜಿಯಾಬಾದ್‌ನ ವ್ಯಕ್ತಿಯೊಬ್ಬರು ವಿಷ ಸೇವಿಸಿ ಜನತಾ ದರ್ಬಾರ್‌ಗೆ ತಲುಪಿದ್ದಾರೆ. ಈ ವ್ಯಕ್ತಿಯ ಹೆಸರು ಸತ್ಬೀರ್ ಗುರ್ಜರ್ ಎಂದು ಹೇಳಲಾಗುತ್ತಿದೆ. ಈ ವ್ಯಕ್ತಿಗೆ 65 ವರ್ಷ ವಯಸ್ಸಾಗಿದ್ದು, ಲೋನಿಯ ಸಿರೌಲಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಭದ್ರತಾ ಸಿಬ್ಬಂದಿಯ ಪ್ರಕಾರ, ಆ ವ್ಯಕ್ತಿ ನಿವೃತ್ತ ಸೈನಿಕ, ಜನತಾ ದರ್ಬಾರ್‌ನಲ್ಲಿದ್ದ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿಗೆ ಸತ್ಬೀರ್ ವಿಷ ಸೇವಿಸಿ ಅಲ್ಲಿಗೆ ತಲುಪಿದ್ದಾರೆಂದು ತಿಳಿದ ತಕ್ಷಣ, ಸತ್ಬೀರ್ ಅವರನ್ನು ನಾಗರಿಕ ಆಸ್ಪತ್ರೆಗೆ ದಾಖಲಿಸಲಾಯಿತು. ಸತ್ಬೀರ್ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.

ಅಧಿಕಾರಿಗಳು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ನಿವೃತ್ತ ಸೈನಿಕನನ್ನೂ ವಿಚಾರಣೆಗೆ ಒಳಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.ಅಲ್ಲಿ ಹಾಜರಿದ್ದ ಜನರು ಮತ್ತು ಅಧಿಕಾರಿಗಳಿಗೆ ತಮ್ಮ ಸಮಸ್ಯೆಯಿಂದ ಹತಾಶೆಗೊಂಡು ವಿಷ ಸೇವಿಸಿರುವುದಾಗಿ ಹೇಳಿದ್ದರು.ಅವರ ಮಾತು ಕೇಳಿ ಅಲ್ಲಿದ್ದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡರು ಮತ್ತು ಅವರನ್ನು ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!