ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ವತಃ ದೇವರೇ ಹೇಳಿದ್ರೂ ನಾನು ಮತ್ತೆ ಚುನಾವಣೆಗೆ ನಿಲ್ಲಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ತುಮಕೂರು-ಬೆಂಗಳೂರು ನಾಲ್ಕು ಪಥದ ರೈಲ್ವೆ. ಸರ್ವೆ ಆಯ್ತು ಡಿಪಿಆರ್ ಶುರು ಮಾಡಿಸಿದ್ದೀನಿ. ಇದರ ಜೊತೆಗೆ ಎನ್ಹೆಚ್4ರ ತಿಮ್ಮರಾಜನಹಳ್ಳಿ ಅಭಿವೃದ್ಧಿ ಆಗುತ್ತದೆ. ಕೆಐಡಿಬಿಯವರ ಜೊತೆ ಮಾತನಾಡಿದ್ದೇನೆ. ಇದೆಲ್ಲಾ ಅಭಿವೃದ್ಧಿ ನಿಮಗಾಗಿ. ನಾನು ಇನ್ನು ಐವತ್ತು ವರ್ಷ ಇರ್ತೀನೇನಪ್ಪಾ.. ಇಲ್ಲ ಇರೋದಿಲ್ಲ. ನಾನು ಮತ್ತೇ ಎಲೆಕ್ಷನ್ಗೆ ನಿಂತ್ಕೊ ಅಂತ ದೇವ್ರು ಹೇಳಿದರೂ ಕೇಳುವವನಲ್ಲ. ನನ್ನ ಭಾವನೆ ಹಂಗಿದೆ ಎಂದು ತಿಳಿಸಿದ್ದಾರೆ.