ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾತನಾಡುವವರು ಮಾತನಾಡಲಿ, ನಾನು ಸೂಕ್ತ ವೇದಿಕೆಯಲ್ಲಿ ಆ ಬಗ್ಗೆ ಮಾತನಾಡುವುದಾಗಿ ಬೂಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧ ವಿಚಾರವಾಗಿ ಮಾತನಾಡಿದ ಅವರು, ಈ ಹಿಂದೆ ನಾನು ಏನು ಮಾತನಾಡಿದ್ದೇನೆ ಎಂಬುದನ್ನು ತಿಳಿದುಕೊಂಡು ಮಾತನಾಡಲಿ. ಯಾರೋ ವಿರೋಧ ಮಾತ್ತಾರೆ ಅಂದ್ರೆ ಅದಕ್ಕೆ ನಾನು ಉತ್ತರ ಕೊಡಬೇಕಾ? ಆ ಬಗ್ಗೆ ನಾನು ಸೂಕ್ತ ಸಮಯದಲ್ಲಿ ಮಾತನಾಡುತ್ತೇನೆ ಎಂದರು.
ವಿರೋಧ ಮಾಡುವವರು ಮಾಡಲಿ. ಅದು ಅವರ ಸ್ವಾತಂತ್ರ್ಯವಾಗಿದೆ. ನಾನು ಅದಕ್ಕೆ ಪ್ರತಿಕ್ರಿಯೆ ಕೊಡೋದಿಲ್ಲ. ನಾನು ಸೂಕ್ತ ವೇದಿಕೆಯಲ್ಲೇ ಸಕ್ಷಮವಾಗಿ ಮಾತನಾಡುವುದಾಗಿ ತಿಳಿಸಿದರು.