February 10, 2026
Tuesday, February 10, 2026
spot_img

AICC ಸಭೆಗೆ ಡಿಕೆಶಿ ದೆಹಲಿಗೆ ಹೋಗಿದ್ದು, ನನಗೆ ಆಹ್ವಾನ ಬಂದರೆ ಹೋಗ್ತೇನೆ: ಸಿಎಂ ಸಿದ್ದರಾಮಯ್ಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಅಸ್ಸಾಂ ವಿಧಾನಸಭಾ ಚುನಾವಣೆ ತಯಾರಿ ಸಂಬಂಧ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಸಭೆಗಳಲ್ಲಿ ಭಾಗವಹಿಸಲು ದೆಹಲಿಗೆ ತೆರಳುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಸ್ಸಾಂ ಚುನಾವಣೆಗೆ ಸಂಬಂಧಿಸಿದಂತೆ (ಎಐಸಿಸಿ) ಸಭೆಗಳಲ್ಲಿ ಭಾಗವಹಿಸಲು ಡಿಕೆ. ಶಿವಕುಮಾರ್ ಇಂದು ದೆಹಲಿಗೆ ಹೋಗುತ್ತಿರುವುದಾಗಿ ನನಗೆ ಪತ್ರ ಬರೆದಿದ್ದಾರೆ. ನನಗೆ ಆಹ್ವಾನ ಬಂದರೆ ಮಾತ್ರ ನಾನು ದೆಹಲಿಗೆ ಹೋಗುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯದ ನಾಯಕತ್ವ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವೇ ಅಂತಿಮ. ಈ ವಿಷಯವನ್ನು ಪದೇಪದೇ ಕೇಳುವುದು ಬೇಡ. ಆಹ್ವಾನ ಬಂದರೆ ಮಾತ್ರ ನಾನು ದೆಹಲಿಗೆ ಹೋಗುತ್ತೇನೆ, ಆಹ್ವಾನವಿಲ್ಲದೆ ಹೋಗುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !