ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಯಮತ್ತೂರಿನ ಇಶಾ ಯೋಗ ಕೇಂದ್ರದಲ್ಲಿ ಈ ವರ್ಷ ಫೆಬ್ರವರಿ 15ರಂದು ಮಹಾ ಶಿವರಾತ್ರಿ ಅದ್ದೂರಿಯಾಗಿ ನಡೆಯಲಿದ್ದು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಮಹಾ ಶಿವರಾತ್ರಿ ಉತ್ಸವವು ಫೆ. 15ರಂದು ಸಂಜೆ 6 ಗಂಟೆಯಿಂದ ಮರುದಿನ ಬೆಳಿಗ್ಗೆ 6 ಗಂಟೆಯವರೆಗೆ ನಡೆಯಲಿದೆ. ಈ ವೇಳೆ ಧ್ಯಾನ, ಮಂತ್ರ ಪಠಣ, ಯೋಗೇಶ್ವರಲಿಂಗ ಮಹಾ ಅಭಿಷೇಕ ಮತ್ತು ಅತ್ಯುತ್ತಮ ಕಲಾವಿದರಿಂದ ಸಂಗೀತ ಪ್ರದರ್ಶನಗಳು ನಡೆಯಲಿವೆ. ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಸಂಸದೀಯ ವ್ಯವಹಾರಗಳ ಸಚಿವ ಎಲ್. ಮುರುಗನ್ ಮತ್ತು ಇತರ ಗಣ್ಯರು ಕೂಡ ಪಾಲ್ಗೊಳ್ಳಲಿದ್ದಾರೆ.
ಕೊಯಮತ್ತೂರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಕ್ಷಿಣ ಕೈಲಾಯ ಭಕ್ತಿ ಪೆರವೈ ಸ್ವಯಂಸೇವಕ ರವೀಂದ್ರನ್ ಮತ್ತು ಸ್ವಯಂಸೇವಕ ಸರವಣನ್ , 32ನೇ ಮಹಾ ಶಿವರಾತ್ರಿ ಹಬ್ಬವನ್ನು ಫೆ. 15ರಂದು ಇಶಾ ಯೋಗ ಕೇಂದ್ರದಲ್ಲಿ ಅದ್ಧೂರಿಯಾಗಿ ಆಚರಿಸಲಾಗುವುದು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಅನೇಕ ಪ್ರಮುಖ ವ್ಯಕ್ತಿಗಳು ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಲಕ್ಷಾಂತರ ಜನರು ಸಹ ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.
ಈ ವರ್ಷ ಮೊದಲ ಬಾರಿಗೆ, ಸದ್ಗುರು ಆದಿಯೋಗಿ ಈ ಹಿಂದೆ ಸ್ಥಾಪಿಸಲಾದ ಯೋಗೇಶ್ವರ ಲಿಂಗಕ್ಕೆ ಮಹಾ ಅಭಿಷೇಕದ ಆಧ್ಯಾತ್ಮಿಕ ಕಾರ್ಯವನ್ನು ಮಾಡಲಿದ್ದಾರೆ ಎಂದು ಅವರು ತಿಳಿಸಿದರು.



