February 23, 2026
Monday, February 23, 2026
spot_img

ಕಂದಕಕ್ಕೆ ಉರುಳಿದ ಪಿಕಪ್ ವಾಹನ: ಐವರು ಸಾ*ವು, ಏಳು ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಧರಣಿ ತಾಲೂಕಿನ ರಾಣಿಗಾಂವ್ ಘಾಟ್ ವಿಭಾಗದಲ್ಲಿ, ಶಿವಝಿರಿ ಸಮೀಪ ಪಿಕಪ್ ವಾಹನ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿ ಬಿದ್ದ ಘಟನೆ ನಡೆದಿದೆ.

ಘಟನಾ ಸ್ಥಳದಲ್ಲೇ ಐವರು ಮೃತಪಟ್ಟಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಿರಿದಾದ ಬೆಟ್ಟದ ರಸ್ತೆ ಹಾಗೂ ಕಂದಕದ ಆಳದಿಂದ ರಕ್ಷಣಾ ಕಾರ್ಯಾಚರಣೆ ಕಷ್ಟಕರವಾಗಿತ್ತು. ಪೊಲೀಸರು, ಸ್ಥಳೀಯ ಆಡಳಿತ ಹಾಗೂ ಗ್ರಾಮಸ್ಥರು ಸೇರಿ ಗಾಯಾಳುಗಳನ್ನು ಹೊರತೆಗೆದು ಧರಣಿ ಉಪಜಿಲ್ಲಾ ಆಸ್ಪತ್ರೆಗೆ ಸಾಗಿಸಿದರು. ಗಾಯಗೊಂಡವರ ಸ್ಥಿತಿ ಬಗ್ಗೆ ವೈದ್ಯರು ನಿಗಾ ವಹಿಸಿದ್ದಾರೆ.

ಅಪಘಾತದ ನಿಖರ ಕಾರಣ ಹಾಗೂ ವಾಹನದಲ್ಲಿದ್ದವರ ಸಂಖ್ಯೆ ಕುರಿತು ತನಿಖೆ ಮುಂದುವರಿದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !