ಹೊಸದಿಗಂತ ಡಿಜಿಟಲ್ ಡೆಸ್ಕ್:
ಇ-ಮೇಲ್ ಮೂಲಕ ಬಂದ ಸರಣಿ ಬಾಂಬ್ ಬೆದರಿಕೆ ಸಂದೇಶಗಳ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯೆಲ್ಲೆಡೆ ಭದ್ರತೆಯನ್ನು ಹೆಚ್ಚಿಸಲಾಗಿದೆ.
ದೆಹಲಿ ವಿಧಾನಸಭೆ, ಸಚಿವಾಲಯ, ಕೆಂಪುಕೋಟೆ, ಸೇನಾ ಶಾಲೆ ಹಾಗೂ ಇನ್ನೂ ಕೆಲವು ಶಿಕ್ಷಣ ಸಂಸ್ಥೆಗಳಿಗೆ ಸೋಮವಾರ ಬೆಳಿಗ್ಗೆ ಬೆದರಿಕೆ ಸಂದೇಶಗಳು ಬಂದಿವೆ ಎನ್ನಲಾಗಿದೆ.
ತಕ್ಷಣ ಕಾರ್ಯಾಚರಣೆ ಕೈಗೊಂಡ ಭದ್ರತಾ ಪಡೆಗಳು ಸಂಶಯಾಸ್ಪದ ಸ್ಥಳಗಳಲ್ಲಿ ಸಂಪೂರ್ಣ ತಪಾಸಣೆ ನಡೆಸಿ, ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲವೆಂದು ಸ್ಪಷ್ಟಪಡಿಸಿವೆ. ಇದನ್ನು ಹುಸಿ ಬೆದರಿಕೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ ಮುಂಜಾಗ್ರತಾ ಕ್ರಮವಾಗಿ ನಗರಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ:
ಮೆಟ್ರೋ ನಿಲ್ದಾಣಗಳು ಮತ್ತು ಪ್ರಮುಖ ಕಟ್ಟಡಗಳ ಸುತ್ತ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಕೆಂಪುಕೋಟೆ, ವಿಧಾನಸಭೆ ಹಾಗೂ ಸಚಿವಾಲಯದಂತಹ ಸೂಕ್ಷ್ಮ ಪ್ರದೇಶಗಳಲ್ಲಿ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳವನ್ನು ತಹಬಂದಿಗೆ ಇಡಲಾಗಿದೆ.
ಧಮಕಿ ಸಂದೇಶಗಳಲ್ಲಿ ಕೆಲವು ನಿರ್ದಿಷ್ಟ ಸಮಯಗಳನ್ನು ಉಲ್ಲೇಖಿಸಲಾಗಿತ್ತು. ದುಷ್ಕರ್ಮಿಗಳು ಇ-ಮೇಲ್ ಕಳುಹಿಸಲು ಜಾಲ ಮರೆಮಾಡುವ ತಂತ್ರ ಬಳಸಿರಬಹುದೆಂದು ಶಂಕಿಸಲಾಗಿದೆ. ಸೈಬರ್ ಘಟಕವು ಮೂಲವನ್ನು ಪತ್ತೆಹಚ್ಚಲು ತನಿಖೆ ಮುಂದುವರಿಸಿದೆ. ಸಾರ್ವಜನಿಕರು ಆತಂಕಗೊಳ್ಳದೇ ಜಾಗರೂಕರಾಗಿರಲು ಪೊಲೀಸರು ಮನವಿ ಮಾಡಿದ್ದಾರೆ.



