February 27, 2026
Friday, February 27, 2026
spot_img

ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟವಾಡುತ್ತಿದೆ: ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ

ಹೊಸದಿಗಂತ ವರದಿ ವಿಜಯಪುರ:

ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ರಾಜ್ಯ ಸರ್ಕಾರಕ್ಕೆ ಮನಸ್ಸು ಇಲ್ಲ ಎಂದು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಕಿಡಿಕಾರಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಲಕ್ಷಾಂತರ ಖಾಲಿ ಹುದ್ದೆಗಳು ಇವೆ. ಆದರೆ, ಸರ್ಕಾರ ಮಾತ್ರ ವಿದ್ಯಾರ್ಥಿಗಳ ಜೊತೆಗೆ ಚೆಲ್ಲಾಟವಾಡುತ್ತಿದೆ ಎಂದರು.

ಇದನ್ನೂ ಓದಿ:

ಇನ್ನು ಗ್ಯಾರಂಟಿಗಳಿಂದ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಸದ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಜ್ಞಾನೋದಯ ಆಗಿದೆ. ಗ್ಯಾರಂಟಿಯಿಂದ ಸರ್ಕಾರಕ್ಕೆ ಹೊರೆ ಆಗುತ್ತಿದೆ ಎಂದಿದ್ದಾರೆ. ಅದಕ್ಕಾಗಿ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಅಭಿವೃದ್ಧಿ ಕಡೆಗೆ ಗಮನ ಕೊಡಬೇಕು ಎಂದರು.

ಅಲ್ಲದೇ, ಮುಂದಿನ ಚುನಾವಣೆ ಬಿಜೆಪಿ ಜೊತೆಗೆ ಮೈತ್ರಿಯೊಂದಿಗೆ ಚುನಾವಣೆ ಸ್ಪರ್ಧೆ ಮಾಡುತ್ತೇವೆ ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !