ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಎರಡು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಆರೋಪದಲ್ಲಿ ವ್ಯಕ್ತಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಪೆರಿಯನಾಯಗಂ ಎಂದು ಗುರುತಿಸಲಾಗಿದೆ. ಆತ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದ ಕಾರ್ಯಕರ್ತನಾಗಿರುವುದಾಗಿ ತಿಳಿದುಬಂದಿದೆ.
ಬಾಲಕಿಯ ತಾಯಿ ಪ್ರಿನ್ಸಿ ವೈವಾಹಿಕ ಭಿನ್ನಾಭಿಪ್ರಾಯದ ಹಿನ್ನೆಲೆ ಗಂಡ ಸೂರ್ಯನಿಂದ ದೂರವಾಗಿ ಅಂಚೆಟ್ಟಿ ಗ್ರಾಮದಲ್ಲಿ ವಾಸಿಸುತ್ತಿದ್ದರು. ಈ ಅವಧಿಯಲ್ಲಿ ಪೆರಿಯನಾಯಗಂ ಜೊತೆ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. ಫೆಬ್ರವರಿ 11ರಂದು ಮಗು ಅಸ್ವಸ್ಥಗೊಂಡು ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು.
ಇದನ್ನೂ ಓದಿ:
ಘಟನೆ ಅನುಮಾನಾಸ್ಪದವಾಗಿರುವುದರಿಂದ ತಂದೆ ಸೂರ್ಯ ದೂರು ನೀಡಿದ ನಂತರ ತನಿಖೆ ಆರಂಭಿಸಲಾಗಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿಯ ದೇಹದಲ್ಲಿ ಗಾಯಗಳಿರುವುದು ಪತ್ತೆಯಾಗಿದ್ದು, ಲೈಂಗಿಕ ದೌರ್ಜನ್ಯ ಶಂಕೆ ಬಲಗೊಂಡಿದೆ.
ಪೊಲೀಸರು ಪೆರಿಯನಾಯಗಂನನ್ನು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಘಟನೆಯ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.



