ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಿಹಾರ ರಾಜಕೀಯದಲ್ಲಿ ಹೊಸ ಯುಗ ಶುರುವಾಗಲಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ರಾಜಕೀಯಕ್ಕೆ ಎಂಟ್ರಿ ಆಗಲು ವೇದಿಕೆ ಸಜ್ಜಾಗಿದೆ.
ಈ ಕುರಿತು ಸಚಿವ ಶ್ರವಣ್ ಕುಮಾರ್ ಮಾಹಿತಿ ನೀಡಿದ್ದು, ಅಧಿಕೃತ ಘೋಷಣೆಯಾಗಲಿದ್ದು, ಪಕ್ಷದಲ್ಲಿ ಅವರು ನಿಭಾಯಿಸುವ ಜವಾಬ್ದಾರಿಯ ಕುರಿತೂ ಮಾಹಿತಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಪಕ್ಷವು ಒಂದು ಅಥವಾ ಎರಡು ದಿನಗಳಲ್ಲಿ ಈ ಕುರಿತು ಅಧಿಕೃತ ಘೋಷಣೆ ಮಾಡಲಿದೆ. ನಿಶಾಂತ್ ಅವರು ರಾಜಕೀಯಕ್ಕೆ ಬರಬೇಕೆಂದು ಪಕ್ಷದ ಕಾರ್ಯಕರ್ತರು ಕಳೆದ ಹಲವು ವರ್ಷಗಳಿಂದ ಒತ್ತಾಯಿಸುತ್ತಿದ್ದರು. ಹೋಳಿ ಹಬ್ಬದ ಮುನ್ನವೇ ಈ ನಿರ್ಧಾರ ಹೊರಬಂದಿರುವುದು ಕಾರ್ಯಕರ್ತರು ಮತ್ತು ಬೆಂಬಲಿಗರಲ್ಲಿ ಸಂಭ್ರಮ ಮೂಡಿಸಿದೆ ಎಂದು ಅವರು ಹೇಳಿದ್ದಾರೆ.



