March 7, 2026
Saturday, March 7, 2026
spot_img

ರಾಜ್ಯ ಸರಕಾರದಿಂದ ಕಂಬಳಕ್ಕೆ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಸಿಎಂ ಸಿದ್ದರಾಮಯ್ಯ ಭರವಸೆ

ಹೊಸದಿಗಂತ ವರದಿ,ಬಂಟ್ವಾಳ:

ಅವಿಭಜಿತ ದ.ಕ.ಜಿಲ್ಲೆಯಲ್ಲಿ ನಡೆಯುವ ಕಂಬಳ ಜಾತ್ಯಾತೀತ,ದರ್ಮಾತೀತವಾಗಿ ಭಾಗವಹಿಸುವ ಜನಪ್ರಿಯ ಕ್ರೀಡೆಯಾಗಿದ್ದು, ಇದನ್ನು ಉಳಿಸಿ ಬೆಳೆಸುವುದು ನಮ್ಮ ಜವಾಬ್ದಾರಿ. ಈ ನಿಟ್ಟಿನಲ್ಲಿ ನಮ್ಮ ಸರಕಾರ ಕಂಬಳಕ್ಕೆ ಪ್ರೋತ್ಸಾಹ, ಬೆಂಬಲದ ಜತೆಗೆ ಹಣಕಾಸಿನ ನೆರವನ್ನೂ ಕೊಡ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಕೂಡಿಬೈಲಿನಲ್ಲಿ ಶನಿವಾರ ಆರಂಭಗೊಂಡ 15 ನೇ ವರ್ಷದ “ಮೂಡೂರು-ಪಡೂರು” ಜೋಡುಕರೆ ಬಯಲು ಕಂಬಳಕೂಟದಲ್ಲಿ ಸಂಜೆ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜಕೀಯ ಪ್ರಜಾಪ್ರಭುತ್ವದ ಜತೆಯಲ್ಲಿ ಸಾಮಾಜಿಕ ಮತ್ತು ಆರ್ಥಿಕ ಪ್ರಜಾಪ್ರಭುತ್ವ ದೊರಕಿದಾಗ ಮಾತ್ರ ಸ್ವಾತಂತ್ರ್ಯದ ಪರಿಕಲ್ಪನೆಬಯಶಸ್ಸು ಕಾಣುತ್ರದೆ ಈ ಹಿನ್ನಲೆಯಲ್ಲಿ ಸಮಾಜದ ದುರ್ಬಲ ವರ್ಗವನ್ನು ಮುಖ್ಯವಾಹಿನಿಗೆ ತರುವ ಕೆಲಸ ಮಾಡುತ್ತಿದ್ದೆವೆ.ಮುಂದೆಯೇ ಮಾಡುತ್ತವೆ.ರಾಜ್ಯದ ಜನ ಕೈ ಹಿಡಿಯುತ್ತಾರೆಂಬ ವಿಶ್ವಾಸವಿದೆ. 2028 ಕ್ಕು ನಾವೇ ಅಧಿಕಾರಕ್ಕೆ ಬರುತ್ತವೆ ಎಂದರು.

ರಮಾನಾಥ ರೈಗಳ ಕ್ಷೇತ್ರಕ್ಕೆ ಐದು ಸಾವಿರ ಕೋಟಿ ರೂಪಾಯಿಯನ್ನು ಕಳೆದ ಅವಧಿಯಲ್ಲಿ ತರಿಸಿ ಅಭಿವೃದ್ಧಿ ಮಾಡಲಾಗಿತ್ತು. ಆದರೂ ಅವರನ್ನು ಕ್ಷೇತ್ರದ ಜನ ಸೋಲಿಸಿದರು. ಇದು ನೋವಿನ ಸಂಗತಿ, ಇನ್ನೊಂದು ಸಾರಿ ಅವರು ನಿಲ್ಲುತ್ತಾರೆ. ೨೦೨೮ಕ್ಕೆ ಮತ್ತೆ ಅಭ್ಯರ್ಥಿ ಆಗುತ್ತಾರೆ, ಪ್ರಾಮಾಣಿಕ ಮಂತ್ರಿಗಳಲ್ಲಿ ರಮಾನಾಥ ರೈ ಕೂಡ ಒಬ್ಬರಾಗಿದ್ದರು. ಹೀಗಾಗಿ ಅವರು ಮತ್ತೆ ಗೆಲ್ಲಬೇಕು ಎಂದರು. ಮುಂದಿನ ಆರ್ಥಿಕ ವರ್ಷದಲ್ಲಿ‌ ಬೆಂಜನಪದವಿನಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಲಾಗುವುದು ಎಂದರು.

ಸಿಎಂಗೆ ಕಂಬಳದ ಬೆತ್ತ:
ಇದೇ ವೇಳೆ ಕಂಬಳ ಸಮಿತಿಯ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಂಬಳದ ಬೆತ್ತ,ಸ್ಮರಣಿಕೆಯನ್ನಿತ್ತು ಸನ್ಮಾನಿಸಲಾಯಿತು.

ಸಮಿತಿಯ ಗೌರವಾಧ್ಯಕ್ಷ ,ಮಾಜಿಸಚಿವ ಬಿ.ರಮಾನಾಥ ರೈ ಪ್ರಸ್ತಾವಿಕವಾಗಿ ಮಾತನಾಡಿ,2013-18 ರ ಅವಧಿಯಲ್ಲಿ ಸಿದ್ದರಾಮಯ್ಯಾವರು ಮುಖ್ಯಮಂತ್ರಿಯಾಗಿದ್ದಾಗ ಬಂಟ್ವಾಳ ಕ್ಷೇತ್ರ ಸಹಿತ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕಂಡಿದೆ.ಪಶ್ಚಿಮ ವಾಹಿನಿ ಯೋಜನೆಯಡಿ ಕರಾವಳಿಯ ಮೂರು ಜಿಲ್ಲೆಗೆ 300 ಕೋ.ರೂ.ಅನುದಾನ ಮುಖ್ಯಮಂತ್ರಿಯವರು ಒದಗಿಸಿದ್ದಾರೆ. ಬಂಟ್ವಾಳ ತಾಲೂಕಿನ ಬೆಂಜನಪದವಿನಲ್ಲಿ ಕ್ರೀಡಾಂಗಣ ನಿರ್ಮಾಣವಾಗುವ ನಿಟ್ಟಿನಲ್ಲಿ ಮತ್ತೆ ಜೀವ ನೀಡಬೇಕು ಎಂದು ಮನವಿ ಮಾಡಿದರು.

ಬಾರ್ಕೂರು ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿದ್ಯಾವಾಚಸ್ಪತಿ ಡಾ.ಸಂತೋಷ್ ಗುರೂಜಿ ಆಶೀರ್ವಚನಗೈದರು.ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ,ಸಾರಿಗೆ ಸಚಿವ ರಾಮಲಿಂಗ ರೆಡ್ಡಿ,ಎಂ ಎಲ್ ಸಿ ಸಲೀಮ್ ಆಹ್ಮದ್,ಐವಾನ್ ಡಿಸೋಜ, ಶಾಸಕರುಗಳಾದ ಅಶೋಕ್ ಕುಮಾರ್ ರೈ ,ಟಿ.ಡಿ.ರಾಜೇಗೌಡ , ಮಾಜಿ ಸಚಿವ ವಿನಯ ಕುಮಾರ್ ಸೊರಕೆ,ಸಾಮಾಜಿಕ ಕಾರ್ಯಕರ್ತ ಎಂ.ಜಿ.ಹೆಗಡೆ,ವಿವಿಧ ನಿಗಮದ ಅಧ್ಯಕ್ಷರಾದ ಲಾವಣ್ಯ ಬಲ್ಲಾಳ್,ಟಿ.ಎಮ್ ಶಹೀದ್ ತೆಕ್ಕಿಲ್,ಮಮತಾ ಡಿ.ಎಸ್. ಗಟ್ಟಿ,ಶಾಲೆಟ್ ಪಿಂಟೋ,ಸದಾಶಿವ ಉಳ್ಳಾಲ್,ಸಿಎಂ ಅವರ ಮಾಧ್ಯಮ ಸಲಹೆಗಾರ ಪ್ರಭಾಕರ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ, ಧನಭಾಗ್ಯ ಆರ್.,ಕೆಪಿಸಿಸಿ ಪ್ರ.ಕಾರ್ಯದರ್ಶಿಗಳಾದ ಪದ್ಮರಾಜ್ ಆರ್ ಪೂಜಾರಿ,ಕೃಪಾ ಆಳ್ವ ,ಬಂಟ್ವಾಳ ವಲಯದ ಧರ್ಮಗುರು ವಿಕ್ಟರ್ ಡಿಸೋಜ,ವಿಲ್ಪ್ರೆಡ್ ರೋಡ್ರಿಗಸ್ ಮೈಸೂರು,ಮಾಜಿ ಶಾಸಕಿ ಶಕುಂತಳಾ ಶೆಟ್ಟಿ,ಚೆನ್ನವೇಣಿ ಶೆಟ್ಟಿ,ನ್ಯಾಯವಾದಿ ಅಶ್ವನಿಕುಮಾರ್ ರೈ,ದೀಪಕ್ ಕುಮಾರ್ ರೈ,ಉದ್ಯಮಿಉದಯಹೆಗ್ಡೆ ಉಪಸ್ಥಿತರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !