March 9, 2026
Monday, March 9, 2026
spot_img

ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ಕೆಲ ವ್ಯಕ್ತಿಗಳ ಹೆಸರಿಗೆ ಗೇಟ್ ಪಾಸ್: ಅರ್ಜಿಗಳ ವಿಚಾರಣೆಗೆ ‘ಸುಪ್ರೀಂ’ ಸಮ್ಮತಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವಿಶೇಷ ಪರಿಷ್ಕರಣಾ ಪಟ್ಟಿಯಲ್ಲಿ ತಮ್ಮ ಹೆಸರನ್ನು ತೆಗೆದು ಹಾಕಲಾಗಿದೆ ಎಂದು ಕೆಲವು ವ್ಯಕ್ತಿಗಳು ಸಲ್ಲಿಕೆ ಮಾಡಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್​ ಒಪ್ಪಿಗೆ ನೀಡಿದೆ.

ಹಿರಿಯ ಅಡ್ವೋಕೆಟ್​ ಗುರುಸ್ವಾಮಿ ಅವರು, ಮತದಾರರ ಪಟ್ಟಿಯಿಂದ ತೆಗೆದು ಹಾಕಿರುವ ಇವರು, ಈ ಹಿಂದೆ ಮತ ಚಲಾಯಿಸಿದ ಮತದಾರರಾಗಿದ್ದು, ಇದೀಗ ಅವರ ದಾಖಲೆಗಳನ್ನು ಅಂಗೀಕರಿಸಲಾಗಿಲ್ಲ ಎಂದು ವಾದಿಸಿದರು.

ಸಂಕ್ಷಿಪ್ತ ಸಲ್ಲಿಕೆಗಳನ್ನು ಆಲಿಸಿದ ನಂತರ ಸಿಜೆಐ ಸೂರ್ಯಕಾಂತ್​ ಮತ್ತು ನ್ಯಾ ಜೊಯಮಲ್ಯ ಭಾಗ್ಚಿ ಅವರನ್ನೊಳಗೊಂಡ ಪೀಠ ಮಂಗಳವಾರ ಈ ವಿಷಯವನ್ನು ಆಲಿಸಲು ಒಪ್ಪಿಗೆ ನೀಡಿತು.

ಫೆ. 24ರಂದು ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗ ವ್ಯಕ್ತಪಡಿಸಿದ್ದ ಕಳವಳಗಳನ್ನು ಸುಪ್ರೀಂಕೋರ್ಟ್​ ಆಲಿಸಿತ್ತು. ನ್ಯಾಯಾಲಯವು ಮತದಾರರ ಪಟ್ಟಿಯ ಸ್ಪಷ್ಟತೆ ಮತ್ತು ಪಾವಿತ್ರ್ಯವನ್ನು ಖಚಿತಪಡಿಸಿಕೊಳ್ಳಬೇಕು. ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ಎಸ್‌ಐಆರ್ ತ್ವರಿತಗೊಳಿಸಲು ಕಲ್ಕತ್ತಾ ಹೈಕೋರ್ಟ್ ಕನಿಷ್ಠ ಮೂರು ವರ್ಷಗಳ ಅನುಭವ ಹೊಂದಿರುವ ಸಿವಿಲ್ ನ್ಯಾಯಾಧೀಶರನ್ನು ನಿಯೋಜಿಸಬಹುದು ಎಂದು ಆದೇಶಿಸಿತ್ತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !