ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಬಿಸಿಲು ಅತಿಯಾಗುತ್ತಲೇ ಇದೆ. ಇದರಿಂದಾಗ ಜನರ ಜೀವನ ಅಸ್ತವ್ಯಸ್ತವಾಗಿದೆ, ಹವಾಮಾನ ಇಲಾಖೆ ಎಚ್ಚರಿಕೆ ನೀಡುತ್ತಲೇ ಇದ್ದು, ನಮ್ಮ ಆರೋಗ್ಯಕ್ಕೆ ನಾವೇ ಹೊಣೆ!
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನವು ವಾಡಿಕೆಗಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಇಂದು ಕೂಡ ಬಿಸಿಲಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ರಾಜಧಾನಿಯಲ್ಲಿ ಒಣ ಹವಾಮಾನ ಮುಂದುವರಿಯಲಿದ್ದು, ಗರಿಷ್ಠ ತಾಪಮಾನ 34°C ಮತ್ತು ಕನಿಷ್ಠ ತಾಪಮಾನ 21°C ದಾಖಲಾಗುವ ಸಾಧ್ಯತೆ ಇದೆ. ಮಧ್ಯಾಹ್ನದ ವೇಳೆ ಬಿಸಿಲಿನ ತಾಪ ಹೆಚ್ಚಿರಲಿದೆ. ಕಲಬುರಗಿ, ರಾಯಚೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಬಿಸಿಲು ಕಡು ತೀವ್ರವಾಗಿರಲಿದ್ದು, ತಾಪಮಾನವು 38°C ರಿಂದ 40°C ಗಡಿ ತಲುಪುವ ಸಾಧ್ಯತೆ ಇದೆ. ಹೀಗಾಗಿ ‘ಹೀಟ್ ವೇವ್’ ಬಗ್ಗೆ ಎಚ್ಚರಿಕೆ ನೀಡಲಾಗಿದೆ.
ಆರೋಗ್ಯ ಹೇಗೆ ರಕ್ಷಿಸೋದು?
ಮಧ್ಯಾಹ್ನದ ಬಿಸಿಲಿನಲ್ಲಿ ಓಡಾಡೋದನ್ನು ಆದಷ್ಟು ತಪ್ಪಿಸಿ. ದಿನಕ್ಕೆ ಮೂರು ಲೀಟರ್ ನೀರು ಕುಡಿಯಿರಿ, ಹೈಡ್ರೇಟ್ ಆಗುವಂಥ ತರಕಾರಿ, ಹಣ್ಣುಗಳನ್ನು ಸೇವಿಸಿ.



