March 18, 2026
Wednesday, March 18, 2026
spot_img

ಅರಣ್ಯ ಜಮೀನು ತೆರವು ಕಾರ್ಯಾಚರಣೆ ವೇಳೆ ಪೊಲೀಸರು-ರೈತರ ನಡುವೆ ಮಾತಿನ ಚಕಮಕಿ

ಹೊಸದಿಗಂತ ವರದಿ ಸೋಮವಾರಪೇಟೆ:

ಅರಣ್ಯ ಜಮೀನು ತೆರವು ಕಾರ್ಯಾಚರಣೆ ಸಂದರ್ಭ ಅರಣ್ಯಾಧಿಕಾರಿ ಹಾಗೂ ರೈತರ ನಡುವೆ ಮಾತಿನ ಚಕಮಕಿ ನಡೆದ ಘಟನೆ ಇಂದು ಮಸಗೊಡು ಗ್ರಾಮದಲ್ಲಿ ನಡೆದಿದೆ.

ಮಸಗೋಡು ಗ್ರಾಮದ ಸರ್ವೇ ನಂಬರ್ 24/1 ರಲ್ಲಿ2.50 ಎಕರೆ ಜಾಗವನ್ನು ಅರಣ್ಯ ಇಲಾಖೆಯವರು ಜೆಸಿಬಿಯಿಂದ ತೆರವುಗೊಳಿಸಲು ಯತ್ನಿಸಿದಾಗ ರೈತ ಹೋರಾಟ ಸಮಿತಿ ಹಾಗೂ ರೈತ ಸಂಘದ ಪದಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಅರಣ್ಯ ಇಲಾಖೆಯವರಿಗೆ ಘೆರಾವು ಹಾಕಿದರು.

ರೈತರ ಪ್ರತಿಭಟನೆಗೆ ಮಣಿದ ಅರಣ್ಯ ಇಲಾಖೆ ತೆರವು ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಕದಲುವುದಿಲ್ಲವೆಂದು ರೈತರು ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !