March 23, 2026
Monday, March 23, 2026
spot_img

ʼಕಾಶ್ಮೀರದವರು ಹೃದಯ ಶ್ರೀಮಂತರುʼ ಯುದ್ಧಪೀಡಿತ ಇರಾನ್‌ ಸಂತ್ರಸ್ತರಿಗೆ ಚಿನ್ನಾಭರಣ, ಪಿಗ್ಗಿಬ್ಯಾಂಕ್‌ ಹಣ ಕೊಟ್ಟ ಮಕ್ಕಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇರಾನ್‌ನ ಯುದ್ಧಪೀಡಿತ ಜನರಿಗಾಗಿ ಕಾಶ್ಮೀರದ ಮುಸ್ಲಿಂ ಕುಟುಂಬಗಳ ಮನಸ್ಸು ಮಿಡಿದಿದೆ.ಈ ಜನ ಹೃದಯ ಶ್ರೀಮಂತರಾಗಿದ್ದು, ತಮ್ಮ ಬೆಲೆಬಾಳುವ ಒಡವೆ, ಹಣವನ್ನು ನಿರಾಶ್ರಿತರಿಗಾಗಿ ನೀಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ವಿವಿಧ ಮೂಲೆಗಳಲ್ಲಿ, ವಿಶೇಷವಾಗಿ ಶಿಯಾ ಬಹುಸಂಖ್ಯಾತ ಜಿಲ್ಲೆಗಳಾದ ಬುಡ್ಗಾಮ್ ಮತ್ತು ಬಾರಾಮುಲ್ಲಾದಲ್ಲಿ ಜನರು ದೇಣಿಗೆ ಸಂಗ್ರಹ ಅಭಿಯಾನ ಪ್ರಾರಂಭಿಸಿದ್ದಾರೆ. ತಮ್ಮ ಮನೆಯಲ್ಲಿರುವ ಚಿನ್ನ, ನಗದು, ಬೆಲೆಬಾಳುವ ವಸ್ತುಗಳನ್ನು ಸಂಗ್ರಹಿಸಿ, ಇರಾನ್‌ ಸಂತ್ರಸ್ತರಿಗೆ ಕಳುಹಿಸುತ್ತಿದ್ದಾರೆ.

ಈದ್ ಹಬ್ಬದ ನಂತರ ಭಾನುವಾರ ನಡೆದ ದೇಣಿಗೆ ಅಭಿಯಾನದಲ್ಲಿ ಜನರು ನಗದು ಮಾತ್ರವಲ್ಲದೇ ಚಿನ್ನಾಭರಣ, ಜಾನುವಾರುಗಳು ಮತ್ತು ಸಾಂಪ್ರದಾಯಿಕ ತಾಮ್ರದ ಪಾತ್ರೆಗಳನ್ನು ಸಹ ದೇಣಿಗೆಯಾಗಿ ನೀಡುತ್ತಿದ್ದಾರೆ.

ಮಕ್ಕಳು ತಮ್ಮ ಪಿಗ್ಗಿ ಬ್ಯಾಂಕ್‌ ಹಣವನ್ನು ಕೂಡ ನೀಡುತ್ತಿದ್ದಾರೆ. ಮಹಿಳೆಯರು ಚಿನ್ನ ಮತ್ತು ನಗದನ್ನು ನೀಡಿದ್ದಾರೆ. ಸುಮಾರು ಮೂರು ವರ್ಷಗಳಿಂದ ಸಂರಕ್ಷಿಸಿಟ್ಟಿದ್ದ ಚಿನ್ನವನ್ನು ವೃದ್ಧೆಯೊಬ್ಬರು ಇರಾನ್‌ ಜನತೆಗಾಗಿ ದಾನ ಮಾಡಿದ್ದಾರೆ. ಈ ಬಗ್ಗೆ ಭಾರತದಲ್ಲಿರುವ ಇರಾನಿನ ರಾಯಭಾರ ಕಚೇರಿ ಮಾಹಿತಿ ಹಂಚಿಕೊಂಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !