September 16, 2026
Wednesday, September 16, 2026
spot_img

ಗಂಡನ ಮೃತದೇಹ ನೋಡಿ ಅಪಾರ್ಟ್‌ಮೆಂಟ್‌ನಿಂದ ಹಾರಿ ಪತ್ನಿ ಸಾವು, ಕೌಟುಂಬಿಕ ಕಲಹ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೌಟುಂಬಿಕ ಕಲಹ ಹಿನ್ನೆಲೆ ಟೆಕ್ಕಿ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರಿನ ಕೊತ್ತನೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಭಾನು ಚಂದ್ರ ರೆಡ್ಡಿ ಹಾಗೂ ಸಾಜಿಯಾ ಆತ್ಮಹತ್ಯೆ ಮಾಡಿಕೊಂಡ ದಂಪತಿ. ಮೊದಲಿಗೆ ಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಡನ ಮೃತದೇಹ ಕಂಡು ಪತ್ನಿ ಸಹ ಅಪಾರ್ಟ್‌ಮೆಂಟ್‌ನ 17ನೇ ಫ್ಲೋರ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗಂಡ–ಹೆಂಡತಿ ಇಬ್ಬರೂ ಖಾಸಗಿ ಕಂಪನಿಯಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದರು. ಇಬ್ಬರ ನಡುವೆ ಅನೇಕ ಬಾರಿ ಕಲಹಗಳಾಗಿದೆ. ಇಬ್ಬರೂ ಮಾನಸಿಕ ಒತ್ತಡ ಮತ್ತು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಸೋಮವಾರ ಸಹ ಇಬ್ಬರ ನಡುವೆ ಜಗಳ ಆಗಿದೆ. ಬಳಿಕ ಪತ್ನಿ ಇಲ್ಲದಿರುವಾಗ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾಜಿಯಾ ಮನೆಗೆ ಬಂದು ಗಂಡನ ಹೆಣ ನೋಡಿ ಆಕೆಯೂ ಸಹ ಅಪಾರ್ಟ್‌ಮೆಂಟ್‌ನ ಮೇಲಿನಿಂದ ಹಾರಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಬಗ್ಗೆ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದೆ


Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !