April 6, 2026
Monday, April 6, 2026
spot_img

ಹಳೆ ದ್ವೇಷದ ಹಿನ್ನೆಲೆ ಎರಡು ಗುಂಪುಗಳ ನಡುವೆ ಮಾರಾಮಾರಿ: ರೌಡಿಶೀಟರ್ ಬರ್ಬರ ಹ*ತ್ಯೆ

ಹೊಸದಿಗಂತ ವರದಿ ​ಮದ್ದೂರು:

ದ್ವೇಷದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಮಾರಾಮಾರಿಯಲ್ಲಿ ರೌಡಿ ಶೀಟರ್‌ ಓರ್ವನ ಹತ್ಯೆಯಾಗಿದ್ದು, ಈತನ ಸಹಚರರಿಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ಹೊಳೇ ಆಂಜನೇಯಸ್ವಾಮಿ ರಸ್ತೆಯ ಪಟೇಲ್ ಸಾಮಿಲ್ ಬಳಿ ಭಾನುವಾರ ರಾತ್ರಿ ನಡೆದಿದೆ.

ಮದ್ದೂರಿನ ಹಳೇ ಒಕ್ಕಲಿಗರ ಬೀದಿಯಲ್ಲಿ ವಾಸವಾಗಿದ್ದ ರೌಡಿಶೀಟರ್ ಯಶ್ವಂತ್ ಅಲಿಯಾಸ್ ಕಜ್ಜಿ ಅಲಿಯಾಸ್ ಅಭಿ ಹಲ್ಲೆಯಿಂದ ತೀವ್ರ ರಕ್ತಸ್ತ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.

ಈತನ ಸಹಚರರಾದ ಗೊರವನಹಳ್ಳಿಯ ದರ್ಶನ್ ಮತ್ತು ಸಚ್ಚಿನ್ ಗಾಯಗೊಂಡಿದ್ದು, ಮದ್ದೂರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್‌ಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !