ಹೊಸದಿಗಂತ ವರದಿ ಧಾರವಾಡ:
ಕಾಂಗ್ರೆಸ್ ಯುವ ಧುರೀಣ ಫೈರೋಜ್ ಖಾನ್ ಪಠಾಣ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಮೆಹಬೂಬ್ ನಗರದಲ್ಲಿ ನಡೆದಿದೆ.
ಮಾತನಾಡಿಸುವ ನೆಪದಲ್ಲಿ ರಾತ್ರೋರಾತ್ರಿ ಮನೆಗೆ ನುಗ್ಗಿದ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚೆ ಕೊಲೆ ಮಾಡಿದ್ದಾರೆ. ಕೊಲೆಗೆ ಹಳೆಯ ವೈಷಮ್ಯ ಎಂದು ಶಂಕಿಸಲಾಗಿದೆ.
ಈ ಕುರಿತು ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಹು-ಧಾ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ತಂಡ ರಚಿಸಿದ್ದಾರೆ ತಿಳಿಸಿದ್ದಾರೆ.



