April 11, 2026
Saturday, April 11, 2026
spot_img

SHOCKING | ವಾಕಿಂಗ್‌ ಹೋಗ್ತಿದ್ದ ವಕೀಲನನ್ನು ಗುಂಡಿಟ್ಟು ಕೊಂದುಬಿಟ್ರು! ಕಾರಣ ಏನು ಗೊತ್ತಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ವಕೀಲನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಹಿರಿಯ ವಕೀಲ ರಾಜೀವ್‌ ಸಿಂಗ್‌ (45) ಹತ್ಯೆಗೀಡಾದ ವ್ಯಕ್ತಿ. ಶೂಟೌಟ್‌ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗುಂಡಿನ ದಾಳಿ ನಡೆಸಿ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ರಾಜೀವ್‌ ಸಿಂಗ್‌ ಎಂದಿನಂತೆ ಬೆಳಗ್ಗೆ ವಾಕಿಂಗ್‌ ಹೋಗಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು, ವಕೀಲನ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡೇಟಿಗೆ ವಕೀಲ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !