ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳಾ ಮೀಸಲಾತಿ ಕಾಯ್ದೆಯ ಜಾರಿಗೆ ಸಂಬಂಧಿಸಿದಂತೆ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. ಈ ಮಹತ್ವದ ವಿಷಯದ ಕುರಿತು ಚರ್ಚಿಸಲು ಏಪ್ರಿಲ್ 15ರಂದು ಎಲ್ಲಾ ವಿರೋಧ ಪಕ್ಷಗಳ ನಾಯಕರ ಸಭೆಯನ್ನು ಕಾಂಗ್ರೆಸ್ ಕರೆಯಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಮಹಿಳಾ ಮೀಸಲಾತಿ ಕಾಯ್ದೆಯನ್ನು ಕಾಂಗ್ರೆಸ್ ಸಂಪೂರ್ಣವಾಗಿ ಬೆಂಬಲಿಸುತ್ತದೆ ಎಂದು ಸ್ಪಷ್ಟಪಡಿಸಿದರು. ಆದರೆ, ಇದರ ಜಾರಿಗೆ ಸಂಬಂಧಿಸಿದಂತೆ ದೇಶದ ರಾಜಕೀಯ ಮತ್ತು ಸಂವಿಧಾನಾತ್ಮಕ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು ವ್ಯಾಪಕ ಸಮಾಲೋಚನೆ ಅಗತ್ಯವಿದೆ ಎಂದು ಹೇಳಿದರು. ಕೇಂದ್ರ ಸರ್ಕಾರ ಈ ವಿಷಯದಲ್ಲಿ ಸರ್ವಪಕ್ಷ ಸಭೆ ನಡೆಸಲು ಮುಂದಾಗಿಲ್ಲ ಎಂಬ ಆರೋಪವನ್ನೂ ಅವರು ಮಾಡಿದ್ದಾರೆ.
ಇದನ್ನೂ ಓದಿ:
ನಾರಿ ಶಕ್ತಿ ವಂದನ್ ಅಧಿನಿಯಮಕ್ಕೆ ನಾವು ವಿರೋಧಿಗಳಲ್ಲ. ಆದರೆ ಇಂತಹ ದೊಡ್ಡ ನಿರ್ಧಾರಗಳನ್ನು ರಾಜಕೀಯ ಲಾಭಕ್ಕಾಗಿ ತುರ್ತಾಗಿ ಮುಂದೂಡಬಾರದು. ಎಲ್ಲಾ ಪಕ್ಷಗಳನ್ನು ಒಟ್ಟಿಗೆ ಕರೆದು ಚರ್ಚಿಸಿ ಅನುಷ್ಠಾನದ ರೂಪುರೇಷೆಗಳನ್ನು ತೀರ್ಮಾನಿಸಬೇಕು, ಎಂದು ಖರ್ಗೆ ಹೇಳಿದರು. ಇದೇ ಹಿನ್ನೆಲೆ ಏಪ್ರಿಲ್ 15ರಂದು ವಿರೋಧ ಪಕ್ಷಗಳ ಸಭೆಯಲ್ಲಿ ಮುಂದಿನ ತಂತ್ರವನ್ನು ನಿರ್ಧರಿಸಲಾಗುವುದು ಎಂದರು.



