ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ರಾಜ್ಯ ಸಾರಿಗೆ ನೌಕರರು ಬೇಡಿಕೆ ಇಟ್ಟಿದ್ದು, ನಾಳೆ ಮುಷ್ಕರಕ್ಕೆ ಮುಂದಾಗಿದ್ದಾರೆ. ಹಿಂಬಾಕಿ ಹಾಗೂ ಎರಡು ವರ್ಷಗಳಿಂದ ಕೇಳುತ್ತಿರುವ ವೇತನ ಪರಿಷ್ಕರಣೆಗೆ ಆಗ್ರಹಿಸಿ ನೌಕರರು ಹೋರಾಟಕ್ಕೆ ಸಜ್ಜಾಗಿದ್ದಾರೆ.
ನಾಳೆಯಿಂದ ಧರಣಿ ಆರಂಭವಾಗಲಿದ್ದು, ಬಸ್ ಓಡಾಟದಲ್ಲಿ ಸಮಸ್ಯೆ ಆಗುವ ಸಾಧ್ಯತೆಗಳಿವೆ.
ಶೇ. ಏಳರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಆದರೆ ನಮಗೆ ಶೇ. ೨೫ರಷ್ಟು ಸಂಬಳ ಹೆಚ್ಚಳ ಬೇಕೆಂದು ನೌಕರರು ಪಟ್ಟು ಹಿಡಿದಿದ್ದಾರೆ. ಕರ್ತವ್ಯಕ್ಕೆ ಗೈರಾಗಿ ಸಾವಿರಾರು ನೌಕರರು ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸಲಿದ್ದಾರೆ. ಆದರೆ ನಿಗಮಗಳು ನೌಕರರಿಗೆ ಶಾಕ್ ಕೊಟ್ಟಿದ್ದು, ಎಲ್ಲರೂ ಕರ್ತವ್ಯಕ್ಕೆ ಹಾಜರಾಗಬೇಕು. ಸತ್ಯಾಗ್ರಹ ಮಾಡ್ಕೊಂಡು ಕೂತರೆ ಸಸ್ಪೆಂಡ್ ಮಾಡುತ್ತೇವೆ ಎಂದು ಹೇಳಿದ್ದಾರೆ.



