ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಲ್ಲೂರಿನ ತಾಯಿ ಮೂಕಾಂಬಿಕಾ ದೇವಿ ದೇಗುಲಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿದ್ದಾರೆ.
ದೇವಾಲಯವನ್ನು ವೀಕ್ಷಿಸಿ ನಂತರ ದೇವಿಯ ದರುಶನ ಪಡೆದು ಅಲ್ಲಿಂದ ಉಡುಪಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದಾರೆ.
ದೇವಾಲಯದ ಮುಂದೆ ಇರುವ ಗರುಡಗಂಭದ ಮುಂದೆ ಅರ್ಚಕರ ಜತೆ ಫೋಟೊ ಕ್ಲಿಕ್ಕಿಸಿಕೊಂಡಿದ್ದಾರೆ. ದೇಗುಲದ ಆಡಳಿತ ಮಂಡಳಿ ವತಿಯಿಂದ ಸಚಿವರನ್ನ ಗೌರವಿಸಲಾಗಿದೆ.




