ಬೇಸಿಗೆಯ ಉರಿ ಬಿಸಿಲಿನಲ್ಲಿ ದೇಹವನ್ನು ತಂಪಾಗಿಡಲು ಕೊತ್ತಂಬರಿ ಸೊಪ್ಪಿನ ತಂಬುಳಿ ಒಂದು ಅತ್ಯುತ್ತಮ ಕರ್ನಾಟಕ ಶೈಲಿಯ ಆರೋಗ್ಯಕರ ರೆಸಿಪಿ. ಇದು ಜೀರ್ಣಕ್ರಿಯೆಗೆ ಸಹಾಯಕವಾಗಿದ್ದು, ದೇಹದ ಉಷ್ಣತೆಯನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ.
ಮಾಡೋದು ಹೇಗೆ: ಮೊದಲು ಒಂದು ಚಿಕ್ಕ ಬಾಣಲೆಯಲ್ಲಿ ಸ್ವಲ್ಪ ಎಣ್ಣೆ ಹಾಕಿ ಕೊತ್ತಂಬರಿ ಸೊಪ್ಪು, ಜೀರಿಗೆ ಮತ್ತು ಹಸಿರು ಮೆಣಸಿನಕಾಯಿ ಹಾಕಿ ಹಸಿ ವಾಸನೆ ಹೋಗುವವರೆಗೆ ಸ್ವಲ್ಪ ಹುರಿಯಿರಿ. ನಂತರ ಈ ಮಿಶ್ರಣವನ್ನು ತೆಂಗಿನತುರಿಯೊಂದಿಗೆ ಸೇರಿಸಿ ನುಣ್ಣಗೆ ರುಬ್ಬಿಕೊಳ್ಳಿ.
ಈ ರುಬ್ಬಿದ ಮಿಶ್ರಣಕ್ಕೆ ತಣ್ಣನೆಯ ಮೊಸರು ಅಥವಾ ಮಜ್ಜಿಗೆ ಸೇರಿಸಿ ಚೆನ್ನಾಗಿ ಕಲಸಿ. ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ.
ಇದನ್ನೂ ಓದಿ:
ಇನ್ನೊಂದು ಬಾಣಲೆಯಲ್ಲಿ ಸ್ವಲ್ಪ ಎಣ್ಣೆ ಬಿಸಿ ಮಾಡಿ ಸಾಸಿವೆ, ಜೀರಿಗೆ ಮತ್ತು ಇಂಗು ಹಾಕಿ ಒಗ್ಗರಣೆ ತಯಾರಿಸಿ ಅದನ್ನು ತಂಬುಳಿಗೆ ಸೇರಿಸಿ.
ಚೆನ್ನಾಗಿ ಮಿಶ್ರಣ ಮಾಡಿದ ಬಳಿಕ ತಕ್ಷಣವೇ ಸೇವಿಸಬಹುದು. ಈ ತಂಬುಳಿ ದೇಹವನ್ನು ತಂಪಾಗಿಡುವುದಲ್ಲದೆ, ಹೊಟ್ಟೆಯ ಆರೋಗ್ಯಕ್ಕೂ ಉತ್ತಮ. ಬೇಸಿಗೆಯಲ್ಲಿ ದಿನಕ್ಕೆ ಒಮ್ಮೆ ಕುಡಿದರೆ ದಣಿವು ಕಡಿಮೆಯಾಗುತ್ತದೆ ಮತ್ತು ಹೈಡ್ರೇಷನ್ ಕಾಪಾಡುತ್ತದೆ.



