ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ಎಂ.ಕೆ. ಸ್ಟಾಲಿನ್ ಅವರು ರಾಜೀನಾಮೆ ನೀಡಿದ್ದಾರೆ.
ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಔಪಚಾರಿಕವಾಗಿ ಕಳುಹಿಸಿದ್ದು, ರಾಜ್ಯಪಾಲರು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಬಳಿಕ ಹೊಸ ಸರ್ಕಾರ ರಚನೆಯಾಗುವವರೆಗೆ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರಿಯುವಂತೆ ತಿಳಿಸಿದ್ದಾರೆ.
ಚುನಾವಣೆಯಲ್ಲಿ ಡಿಎಂಕೆ ಹೀನಾಯ ಸೋಲು ಅನುಭವಿಸಿದ್ದು, ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷ 108 ಸ್ಥಾನಗಳನ್ನು ಗೆಲ್ಲುವ ಮೂಲಕ ಸರಕಾರ ರಚನೆಗೆ ಸಿದ್ಧತೆ ನಡೆಸುತ್ತಿದೆ.
ಸದ್ಯ ಸರ್ಕಾರ ರಚನೆಗೆ ಬೇಕಾದ ಬಹುಮತಕ್ಕೆ ಕೇವಲ 10 ಸ್ಥಾನಗಳ ಕೊರತೆಯಿದೆ. 2 ವಾರಗಳಲ್ಲಿ ಬಹುಮತ ಸಾಬೀತುಪಡಿಸುವುದಾಗಿ ರಾಜ್ಯಪಾಲರಲ್ಲಿ ಸಮಯಾವಕಾಶ ಕೋರಿದ್ದಾರೆ.



