ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯದ ಕೆರೆಯಲ್ಲಿ ಈಜಲು ಹೋದ ಇಬ್ಬರು ಯುವಕರು ಮುಳುಗಿ ಮೃತಪಟ್ಟಿದ್ದಾರೆ.
ಯರಗನಹಳ್ಳಿ ಬಳಿಯ ಕೆರೆಯಲ್ಲಿ ಆಡಲು ಹೋಗಿದ್ದ ಪ್ರಕಾಶ್ ಗೌಡ ಹಾಗೂ ಯಶಸ್ ಮೃತರು.
ತಮ್ಮ ಸ್ನೇಹಿತರ ಜೊತೆ ಈಜಾಡಲು ಹೋಗಿದ್ದ ವೇಳೆ ಈ ಅವಘಡ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಮೃತದೇಹವನ್ನು ಹೊರತೆಗೆಯಲು ಸಹಾಯ ಮಾಡಿದ್ದಾರೆ.
ಮರಣೋತ್ತರ ಪರೀಕ್ಷೆಯ ನಂತರ ಮೃತದೇಹಗಳನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ. ನೀರಿನಲ್ಲಿ ಹೇಗೆ ಮುಳುಗಿದರು? ಯಾರೆಲ್ಲ ಇದ್ದರು ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ.



