May 13, 2026
Wednesday, May 13, 2026
spot_img

ದ್ವೇಷದ ರಾಜಕಾರಣಕ್ಕೆ ಗುಡ್ ಬೈ: ವಿಧಾನಸಭೆಯಲ್ಲಿ ಸಿಎಂ ವಿಜಯ್ ಕೊಟ್ಟ ಪ್ರಾಮಿಸ್ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿನ ನೂತನ ಮುಖ್ಯಮಂತ್ರಿ ವಿಜಯ್ ಅವರು ವಿಧಾನಸಭೆಯಲ್ಲಿ ತಮ್ಮ ಸರ್ಕಾರದ ಬಲವನ್ನು ಸಾಬೀತುಪಡಿಸುವ ಮೂಲಕ ಸುಭದ್ರ ಆಡಳಿತಕ್ಕೆ ಮುನ್ನುಡಿ ಬರೆದಿದ್ದಾರೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ತಮಿಳಗ ವೆಟ್ರಿ ಕಳಗಂ ಪಕ್ಷವು ಯುವ ಜನತೆ ಮತ್ತು ಮಹಿಳೆಯರ ಅಭೂತಪೂರ್ವ ಬೆಂಬಲದೊಂದಿಗೆ ಪ್ರಮುಖ ಪಕ್ಷವಾಗಿ ಮೂಡಿಬಂದಿತ್ತು.

ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದ ಬಳಿಕ ಮಾತನಾಡಿದ ಅವರು, ಈ ಜಯವನ್ನು ತಮಿಳುನಾಡಿನ ಜನತೆಗೆ ಸಮರ್ಪಿಸಿದರು. “ನಮ್ಮ ಆಡಳಿತದಲ್ಲಿ ದ್ವೇಷಕ್ಕೆ ಜಾಗವಿಲ್ಲ, ಅಭಿವೃದ್ಧಿಗೆ ಮಾತ್ರ ಆದ್ಯತೆ” ಎನ್ನುವ ಮೂಲಕ ವಿರೋಧ ಪಕ್ಷಗಳಿಗೂ ಸಕಾರಾತ್ಮಕ ಸಂದೇಶ ರವಾನಿಸಿದ್ದಾರೆ. ಸರ್ಕಾರಿ ನೌಕರರು ಮತ್ತು ಶಿಕ್ಷಕರ ಹಿತರಕ್ಷಣೆಯ ಜೊತೆಗೆ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ ತಲುಪಿಸುವ ಗುರಿಯನ್ನು ಅವರು ಹೊಂದಿದ್ದಾರೆ.

ಈ ಮೂಲಕ ತಮಿಳುನಾಡು ರಾಜಕೀಯದಲ್ಲಿ “ವಿಜಯ್ ಯುಗ” ಅಧಿಕೃತವಾಗಿ ಭದ್ರಗೊಂಡಂತಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !