ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ದಿ. ಮುಲಾಯಂ ಸಿಂಗ್ ಯಾದವ್ ಪುತ್ರ ಪ್ರತೀಕ್ ಯಾದವ್ ಇಂದು ಸಾವನ್ನಪ್ಪಿದ್ದಾರೆ.
ಇತ್ತ 38 ವರ್ಷದ ಪ್ರತೀಕ್ ಯಾದವ್ ಸಾವಿನ ಹಿಂದೆ ವದಂತಿಗಳು ಹರಿದಾಡುತ್ತಿದ್ದು, ವಿಷಪ್ರಾಶನ ಮಾಡಿದ್ದಾರೆಯೇ ಎಂಬ ಅನುಮಾನಗಳು ಹುಟ್ಟಿಕೊಂಡಿದೆ. ಈ ಬೆನ್ನಲ್ಲೇ ಆಸ್ಪತ್ರೆ ವೈದ್ಯರು ಸ್ಪಷ್ಟನೆ ನೀಡಲು ಮುಂದಾಗಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿದ ಲಖನೌ ಸಿವಿಲ್ ಆಸ್ಪತ್ರೆ ವೈದ್ಯರಾದ ಡಾ. ಜಿ.ಸಿ. ಗುಪ್ತಾ ಅವರು, ಪ್ರತೀಕ್ ಯಾದವ್ ಅವರ ದೇಹದಲ್ಲಿ ಯಾವುದೇ ರೀತಿಯ ವಿಷ ದೊರೆತಿಲ್ಲ. ಹೀಗಾಗಿ ಸಾವಿನ ಹಿಂದೆ ವಿಷಪ್ರಾಶನ ನಡೆದಿಲ್ಲ ಎಂದು ತಿಳಿಸಿದ್ದಾರೆ.
ಈ ಕುರಿತು ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ನಿಖರ ಕಾರಣ ತಿಳಿಯಲಿದೆ. ಪ್ರಾಥಮಿಕ ತನಿಖೆಯಲ್ಲಿ ವಿಷಪ್ರಾಶನದಿಂದ ಸಾವು ಸಂಭವಿಸಿದೆ ಎನ್ನುವುದು ಸುಳ್ಳಾಗಿದ್ದು, ಯಾರು ಈ ಕುರಿತು ವದಂತಿಗಳನ್ನು ಹಬ್ಬಿಸಬೇಡಿ ಎಂದು ಹೇಳಿದ್ದಾರೆ.



