ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ನಿವೃತ್ತ ಮೇಜರ್ ಜನರಲ್ ಬಿ.ಸಿ. ಖಂಡೂರಿ ಅವರು ಇಂದು ನಿಧನರಾಗಿದ್ದಾರೆ.
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಡೆಹ್ರಾಡೂನ್ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದ ಸುದ್ದಿ ಹೊರಬಿದ್ದ ತಕ್ಷಣ ರಾಜಕೀಯ ವಲಯದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.
ಸೇನೆ ಬಳಿಕ ರಾಜಕೀಯ ಸೇವೆ
ಭಾರತೀಯ ಸೇನೆಯಲ್ಲಿ ಮೇಜರ್ ಜನರಲ್ ಆಗಿ ಸೇವೆ ಸಲ್ಲಿಸಿದ್ದ ಖಂಡೂರಿ, ನಿವೃತ್ತಿಯ ಬಳಿಕ ರಾಜಕೀಯ ಪ್ರವೇಶಿಸಿದ್ದರು. ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಎರಡು ಬಾರಿ ಅಧಿಕಾರ ವಹಿಸಿಕೊಂಡು ಆಡಳಿತದಲ್ಲಿ ಶಿಸ್ತು ಮತ್ತು ಪಾರದರ್ಶಕತೆಗೆ ಆದ್ಯತೆ ನೀಡಿದ್ದರು.
ಇದನ್ನೂ ಓದಿ:
ಭ್ರಷ್ಟಾಚಾರ ವಿರೋಧಿ ಕಠಿಣ ನಿಲುವು
ತಮ್ಮ ಆಡಳಿತಾವಧಿಯಲ್ಲಿ ಭ್ರಷ್ಟಾಚಾರದ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದ ಖಂಡೂರಿ, ಜನಸಾಮಾನ್ಯರ ವಿಶ್ವಾಸ ಗಳಿಸಿದ್ದರು. ಸರಳ ವ್ಯಕ್ತಿತ್ವ ಮತ್ತು ಕಟ್ಟುನಿಟ್ಟಿನ ಆಡಳಿತ ಶೈಲಿಯಿಂದ ಅವರು ವಿಶಿಷ್ಟ ನಾಯಕನಾಗಿ ಗುರುತಿಸಿಕೊಂಡಿದ್ದರು.
ಮುಖ್ಯಮಂತ್ರಿಯಿಂದ ಸಂತಾಪ
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಖಂಡೂರಿ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ. “ರಾಷ್ಟ್ರೀಯ ಸೇವೆ ಮತ್ತು ಸಾರ್ವಜನಿಕ ಬದುಕಿನಲ್ಲಿ ಅವರ ಕೊಡುಗೆ ಅಪಾರ. ಅವರ ಅಗಲಿಕೆ ದೇಶಕ್ಕೆ ತುಂಬಲಾರದ ನಷ್ಟ” ಎಂದು ಧಾಮಿ ಹೇಳಿದ್ದಾರೆ.



