August 20, 2026
Thursday, August 20, 2026
spot_img

ಬ್ರೇಕ್‌ಫಾಸ್ಟ್‌ನಲ್ಲಿ ಸಿಎಂ ರಾಜೀನಾಮೆ ಬಾಂಬ್: ಅಂತಿಮ ನಿರ್ಧಾರ ‘ಹೈಕಮಾಂಡ್’ನದ್ದು ಎಂದ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಹಾರ ಸಭೆಯಲ್ಲಿ ರಾಜೀನಾಮೆ ನೀಡುವ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಮಾತನಾಡಿದ ಅವರು, ಯಾವುದೇ ನೋವಿಲ್ಲದೆ, ಸಂಪೂರ್ಣ ಮನಃಪೂರ್ವಕವಾಗಿ ಹುದ್ದೆಯಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ವಿದಾಯ ಬ್ರೇಕ್‌ಫಾಸ್ಟ್‌ನಲ್ಲಿ ರಾಜೀನಾಮೆ ಘೋಷಣೆ

ಮಂತ್ರಿಗಳ ಜೊತೆ ನಡೆದ ಉಪಹಾರ ಸಭೆಯಲ್ಲಿ ಸಿದ್ದರಾಮಯ್ಯ ಅವರು ಹೈಕಮಾಂಡ್ ಸೂಚನೆಗಳನ್ನು ಪಾಲಿಸುವುದು ತಮ್ಮ ಕರ್ತವ್ಯ ಎಂದು ಸ್ಪಷ್ಟಪಡಿಸಿದರು. ಈ ಹಿಂದೆ ನಡೆದ ಒಪ್ಪಂದದ ವಿವರಗಳನ್ನೂ ಅವರು ಸಂಪುಟ ಸಹೋದ್ಯೋಗಿಗಳ ಮುಂದೆ ವಿವರಿಸಿದ್ದಾರೆ.

ಇದನ್ನೂ ಓದಿ:

ಮುಂದಿನ ಸಿಎಂ ಬಗ್ಗೆ ಹೈಕಮಾಂಡ್ ನಿರ್ಧಾರ

ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಉತ್ತರಿಸುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಅಂತಿಮ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.

ಡಿಕೆ ಶಿವಕುಮಾರ್ ಭಾವುಕ ಪ್ರತಿಕ್ರಿಯೆ

ಸಭೆಯ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾವುಕರಾದ ದೃಶ್ಯ ಕಂಡುಬಂದಿದೆ. ಸಿಎಂ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ ಎಂಬ ಕಾರಣಕ್ಕೆ ಅವರು ಭಾವೋದ್ವೇಗಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !