May 31, 2026
Sunday, May 31, 2026
spot_img

ವಿಕಲಚೇತನರ ಬದುಕಿಗೆ ಶಕ್ತಿ: 19 ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ

ಹೊಸದಿಗಂತ ವರದಿ ಬೀದರ್:

ಮಾಜಿ ಸಚಿವರು ಹಾಗೂ ಔರಾದ(ಬಿ) ಕ್ಷೇತ್ರದ ಶಾಸಕರಾದ ಪ್ರಭು ಬಿ. ಚವ್ಹಾಣ ಅವರು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ (ಎಂಎಲ್‌ಎ ಲ್ಯಾಡ್) ಯೋಜನೆಯಡಿ 19 ವಿಕಲಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿದರು.

ಸ್ವಾವಲಂಬಿ ಬದುಕಿಗೆ ನೆರವಾದ ಯೋಜನೆ

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಪ್ರಭು ಚವ್ಹಾಣ, ವಿಕಲಚೇತನರು ಸಮಾಜದ ಮುಖ್ಯವಾಹಿನಿಯಲ್ಲಿ ಆತ್ಮವಿಶ್ವಾಸದಿಂದ ಬದುಕಬೇಕು ಎಂಬ ಉದ್ದೇಶದಿಂದ ವಿವಿಧ ಯೋಜನೆಗಳನ್ನು ತಲುಪಿಸಲಾಗುತ್ತಿದೆ ಎಂದು ಹೇಳಿದರು. ಮಾಶಾಸನ, ವಿದ್ಯಾರ್ಥಿವೇತನ, ಲ್ಯಾಪ್‌ಟಾಪ್ ವಿತರಣೆ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸಲು ಪ್ರಯತ್ನಿಸಲಾಗುತ್ತಿದೆ ಎಂದರು.

ಇದನ್ನೂ ಓದಿ:

ಅಗತ್ಯವಿರುವವರಿಗೆ ಆದ್ಯತೆ

ನಡೆಯಲು ಸಾಧ್ಯವಾಗದ ವಿಕಲಚೇತನರು ವೈದ್ಯಕೀಯ ಪ್ರಮಾಣಪತ್ರ ಹಾಗೂ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿದರೆ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ವಾಹನಗಳನ್ನು ನೀಡಲಾಗುವುದು ಎಂದು ತಿಳಿಸಿದರು. ತೀವ್ರ ಅಗತ್ಯವಿದ್ದ ಫಲಾನುಭವಿಗಳನ್ನು ಗುರುತಿಸಿ ಮೊದಲ ಹಂತದಲ್ಲಿ 19 ಮಂದಿಗೆ ವಾಹನ ವಿತರಿಸಲಾಗಿದೆ ಎಂದು ಹೇಳಿದರು.

ಸುರಕ್ಷಿತ ಸಂಚಾರಕ್ಕೆ ಸಲಹೆ

ವಾಹನ ಪಡೆದ ಫಲಾನುಭವಿಗಳು ರಸ್ತೆಗಳಲ್ಲಿ ಸಂಚರಿಸುವಾಗ ಎಚ್ಚರಿಕೆ ವಹಿಸಬೇಕು. ಹೆಲ್ಮೆಟ್ ಧರಿಸುವುದು, ಸಂಚಾರಿ ನಿಯಮಗಳನ್ನು ಪಾಲಿಸುವುದು ಹಾಗೂ ಅತಿವೇಗ ತಪ್ಪಿಸುವುದು ಅತ್ಯಗತ್ಯ ಎಂದು ಶಾಸಕ ಪ್ರಭು ಚವ್ಹಾಣ ಸಲಹೆ ನೀಡಿದರು. ವಿಕಲಚೇತನರ ಸೇವೆ ಮಾಡುವ ಅವಕಾಶ ಸಿಕ್ಕಿರುವುದೇ ತಮ್ಮ ಸೌಭಾಗ್ಯ ಎಂದು ಅವರು ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !