ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಕಾರಣದ ಅಂಗಳದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ನಾಳೆ ಸಂಜೆ ಡಿ.ಕೆ ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ.
ಲೋಕಭವನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಗಣ್ಯರು ಹಾಗೂ ಸಾರ್ವಜನಿಕರು ಬರುವ ನಿರೀಕ್ಷೆ ಇರುವುದರಿಂದ ವಿಧಾನ ಸೌಧ, ವಿಕಾಸ ಸೌಧ ಹಾಗೂ ಬಹುಮಹಡಿಗಳ ಕಟ್ಟಡದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಜೂನ್ 3 ರಂದು ಅಪರಾಹ್ನ ರಜೆ ಘೋಷಿಸಲಾಗಿದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಆರ್.ಯದು ಕುಮಾರ್ ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ.
ಇನ್ನು ಕರ್ನಾಟಕ ವಿಧಾನಸಭೆ ಸಚಿವಾಲಯದ ಅಧಿಕಾರಿ ಮತ್ತು ನೌಕರರಿಗೆ ಇಂದು ಸಂಜೆ ವಿಶೇಷ ಭೋಜನ ಕೂಟ ಏರ್ಪಡಿಸಲಾಗಿದೆ. ಈ ಕೂಟದಲ್ಲಿ ಸಚಿವಾಲಯದ ಎಲ್ಲ ನೌಕರರು ಭಾಗವಹಿಸುವಂತೆ ಸೂಚನೆ ನೀಡಲಾಗಿದೆ.



