June 2, 2026
Tuesday, June 2, 2026
spot_img

ಮುಂಡಗೋಡಿನಲ್ಲಿ ಖಾಕಿ ಪಡೆ ಭರ್ಜರಿ ಬೇಟೆ: ಬೈಕ್‌ನಲ್ಲಿ ಗಾಂಜಾ ಮಾರುತ್ತಿದ್ದ ಕಿರಾತಕ ಅರೆಸ್ಟ್

ಹೊಸದಿಗಂತ ಮುಂಡಗೋಡ:

ತಾಲೂಕಿನ ಯಲ್ಲಾಪುರ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಖದೀಮನನ್ನು ಮುಂಡಗೋಡ ಪೊಲೀಸರು ಮಂಗಳವಾರ ಯಶಸ್ವಿಯಾಗಿ ಬಂಧಿಸಿದ್ದಾರೆ. ಪಟ್ಟಣದ ಹಳೂರ ಓಣಿಯ ನಿವಾಸಿಯಾದ ಇಸ್ಮಾಯಿಲ್ ಜಮಖಂಡಿ (40) ಬಂಧಿತ ಆರೋಪಿಯಾಗಿದ್ದಾನೆ.

ಹೋಟೆಲ್ ಬಳಿ ಪೊಲೀಸರ ಖೆಡ್ಡಾ:

ಆರೋಪಿಯು ಯಲ್ಲಾಪುರ ರಸ್ತೆಯ ಪ್ರಸಿದ್ಧ ಬ್ಲೂಹಿಲ್ ಹೋಟೆಲ್ ಹತ್ತಿರ ಬ್ಯಾಗ್‌ನಲ್ಲಿ ಗಾಂಜಾ ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಸ್ಥಳದ ಮೇಲೆ ದಾಳಿ ನಡೆಸಿದ್ದಾರೆ. ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಆರೋಪಿಯಿಂದ ಸುಮಾರು 25,000 ರೂ. ಮೌಲ್ಯದ 436 ಗ್ರಾಂ ಗಾಂಜಾ ಮತ್ತು ಕೃತ್ಯಕ್ಕೆ ಬಳಸಲಾಗಿದ್ದ ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿದ್ದ ಪೊಲೀಸ್ ತಂಡ:

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಹೆಚ್ಚುವರಿ ಎಸ್.ಪಿ ಕೃಷ್ಣಮೂರ್ತಿ ಜಿ., ಹಾಗೂ ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ ಅವರ ಸಮರ್ಥ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದೆ.

ಮುಂಡಗೋಡ ಸಿಪಿಐ ರಮೇಶ ಹಾನಾಪುರ, ಪಿಎಸ್ಐ ಮಂಜುನಾಥ ಗೌಡರ, ಪ್ರೊಬೆಷನರಿ ಪಿಎಸೈ ಕಾಸಿಮಸಾ ವಾಗಣಗೇರಿ ನೇತೃತ್ವದ ತಂಡದಲ್ಲಿ ಸಿಬ್ಬಂದಿಗಳಾದ ಸಿದ್ದಲಿಂಗೇಶ, ಅಣ್ಣಪ್ಪ ಬುಡಿಗೇರ, ಕೆಂಚಪ್ಪ ಜಾಲಿಕಟ್ಟಿ, ಮುತ್ತು ಭೋವಿ, ಸಂಜು ರಾಠೋಡ, ಮಂಜುನಾಥ ಓಣಿಕೇರಿ ಮತ್ತು ಬಸವರಾಜ ಒಡೆಯರ ಅವರು ಪಾಲ್ಗೊಂಡು ಆರೋಪಿಯನ್ನು ಸದೆಬಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಪೊಲೀಸರ ಈ ಶ್ಲಾಘನೀಯ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !