ಹೊಸದಿಗಂತ ಡಿಜಿಟಲ್ ಡೆಸ್ಕ್:
ಇನ್ನೇನು ಕೆಲವೇ ನಿಮಿಷಗಳಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಈಗಾಗಲೇ ಲೋಕಭವನಕ್ಕೆ ಡಿಕೆ ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭಾ ಸದಸ್ಯ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶನಿ ಕೆ.ಸಿ. ವೇಣುಗೋಪಾಲ್ ಆಗಮಿಸಿದ್ದಾರೆ.
ಇದರ ಜೊತೆಗೆ ಚಲನಚಿತ್ರ ನಟರು, ಸ್ವಾಮೀಜಿಗಳು, ತೆಲಂಗಾಣ ಸಿಎಂ ಹಾಗೂ ಕೇರಳ ಸಿಎಂ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಡಿಕೆಶಿ ಪತ್ನಿ ಉಷಾ ಹಾಗೂ ಪುತ್ರಿ ಐಶ್ವರ್ಯಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಗಮಿಸಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ರಾಹುಲ್ ಗಾಂಧಿ ಹಾಗೂ ಖರ್ಗೆ ಅವರನ್ನು ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.



