June 4, 2026
Thursday, June 4, 2026
spot_img

WEATHER | ಇಂದು ಮಧ್ಯಾಹ್ನದ ನಂತರ ರಾಜ್ಯದಲ್ಲಿ ಬಿರುಗಾಳಿ ಸಹಿತ ಮಳೆ, ಬೇಗ ಮನೆ ಸೇರ್ಕೊಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಕೂಲ್‌ ಕೂಲ್‌ ವಾತಾವರಣ ಇದ್ದು, ಇಂದು ಕೂಡ ತಂಪಾದ ವಾತಾವರಣ ಮಳೆಯಾಗಿ ಬದಲಾಗಲಿದೆ.

ಇಂದು ಮಧ್ಯಾಹ್ನದ ನಂತರ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಳಗಿನ ಜಾವದಿಂದಲೇ ರಾಜ್ಯದಲ್ಲಿ ತಂಪಾದ ವಾತಾವರಣ ಇದೆ. ಮಧ್ಯಾಹ್ನದ ವೇಳೆ ನೈರುತ್ಯ ದಿಕ್ಕಿನಿಂದ ಅಧಿಕ ಗಾಳಿ ಬೀಸಲಿದೆ. ಕೆಲವು ಜಿಲ್ಲೆಗಳಲ್ಲಿ ಬೆಳಗ್ಗೆಯಿಂದಲೇ ಬಿಸಿಲು ಹೆಚ್ಚು ಇರಲಿದೆ.

ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಬಿಸಿಲಿನ ಬೇಗೆ ಜೋರಾಗಿರಲಿದೆ. ಆದರೆ, ಸಂಜೆಯಾಗುತ್ತಿದ್ದಂತೆ ಹವಾಮಾನದಲ್ಲಿ ಬದಲಾವಣೆ ಕಂಡುಬರಲಿದೆ. ರಾಜ್ಯದಾದ್ಯಂತ ಶೇ. 55 ರಷ್ಟು ಮಳೆಯಾಗುವ ಭಾರಿ ಸಾಧ್ಯತೆಯಿದ್ದು, ಕರಾವಳಿ ಜಿಲ್ಲೆಗಳು, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !