ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡದ ಕೇದಾರನಾಥನ ದರುಶನಕ್ಕೆ ಹೊರಟಿದ್ದರೆ ಈ ಸುದ್ದಿಯನ್ನು ಮಿಸ್ ಮಾಡದೇ ಓದಿ. ಭಾರೀ ಮಳೆಯಿಂದಾಗಿ ಕೇದಾರನಾಥನ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಭಾರೀ ಮಳೆ ಹಾಗೂ ಪ್ರತಿಕೂಲ ಹವಾಮಾನ ಪರಿಸ್ಥಿತಿಯಿಂದಾಗಿ ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ರಸ್ತೆಯಲ್ಲಿ ಭೂಕುಸಿತದ ಅಪಾಯ ಕೂಡ ಇದ್ದು, ಭಕ್ತರು ಎಲ್ಲಿದ್ದಾರೋ ಅಲ್ಲಿಯೇ ಇರುವಂತೆ ಸೂಚನೆ ನೀಡಲಾಗಿದೆ.
ಇನ್ನು ಹೊಸತಾಗಿ ಕೇದಾರನಾಥ ಯಾತ್ರೆಗೆ ಬರುವವರು ಅಧಿಕೃತ ಪ್ರಕಟಣೆಗಳನ್ನು ಗಮನಿಸಿ ತದನಂತರ ಪ್ರಯಾಣ ಆರಂಭಿಸುವುದು ಸೂಕ್ತವಾಗಿದೆ. ಸದ್ಯಕ್ಕೆ ಸುರಕ್ಷಿತ ಸ್ಥಳಗಳಲ್ಲಿ ತಂಗಿ ತದನಂತರ ಆಡಳಿತದ ಸೂಚನೆಗಳನ್ನು ಪಾಲಿಸಬೇಕಿದೆ. ಇನ್ನೂ ಕೆಲವು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನುವ ಎಚ್ಚರಿಕೆ ಸಿಕ್ಕಿದೆ. ಸ್ವಲ್ಪ ಮಳೆ ಕಮ್ಮಿಯಾದ ನಂತರ ಯಾತ್ರೆ ಮತ್ತೆ ಆರಂಭವಾಗಲಿದೆ.



