June 5, 2026
Friday, June 5, 2026
spot_img

ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನ: ಡ್ಯಾಮೇಜ್ ಕಂಟ್ರೋಲ್‌ಗೆ ಇಳಿದ ರಾಹುಲ್ ಗಾಂಧಿ ತಂಡ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಸಚಿವ ಸಂಪುಟದ ಖಾತೆ ಹಂಚಿಕೆ ವಿಚಾರ ಈಗ ತೀವ್ರ ಸ್ವರೂಪದ ಅಸಮಾಧಾನಕ್ಕೆ ಕಾರಣವಾಗಿದೆ. ಹಿರಿಯ ನಾಯಕರಾದ ರಾಮಲಿಂಗಾ ರೆಡ್ಡಿ ಮತ್ತು ಕೆ.ಎಚ್. ಮುನಿಯಪ್ಪ ಅವರು ಬಹಿರಂಗವಾಗಿಯೇ ಬಂಡಾಯದ ಬಾವುಟ ಹಾರಿಸಿರುವುದು ಕೈ ಪಾಳಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಸರ್ಕಾರದ ಆರಂಭದಲ್ಲೇ ಎದುರಾಗಿರುವ ಈ ದೊಡ್ಡ ಕಂಟಕವನ್ನು ನಿವಾರಿಸಲು ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ಹೈಕಮಾಂಡ್, ತುರ್ತು ‘ಡ್ಯಾಮೇಜ್ ಕಂಟ್ರೋಲ್’ ಕಾರ್ಯಾಚರಣೆಗೆ ಮುಂದಾಗಿದೆ.

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಹೈವೋಲ್ಟೇಜ್ ಮೀಟಿಂಗ್!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವಿಐಪಿ ಲಾಂಜ್ ಹಾಗೂ ಅದರ ಪಕ್ಕದಲ್ಲೇ ಇರುವ ಐಷಾರಾಮಿ ತಾಜ್ ಹೋಟೆಲ್ ಈಗ ಮಹತ್ವದ ರಾಜಕೀಯ ವಿದ್ಯಮಾನಕ್ಕೆ ಸಾಕ್ಷಿಯಾಗಿದೆ. ರಾಜ್ಯ ನಾಯಕರ ಮುನಿಸು ಶಮನಗೊಳಿಸಲು ಎಐಸಿಸಿ ನಾಯಕ ರಾಹುಲ್ ಗಾಂಧಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಂಟಿಯಾಗಿ ಹೈವೋಲ್ಟೇಜ್ ಸಭೆ ನಡೆಸುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !